<p>ಗಂಗಾವತಿ: ‘ತಾಲ್ಲೂಕಿನಲ್ಲಿ ಚಿರತೆ ಉಪಟಳ ಹೆಚ್ಚಿದೆ. ಇಬ್ಬರು ಯುವಕರು ಬಲಿಯಾಗಿದ್ದಾರೆ. ಸಂಜೆ ವೇಳೆ ಗ್ರಾಮಸ್ಥರು ಒಬ್ಬೊಬ್ಬರೇ ತಿರುಗಾಡಬಾರದು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್ ರಫಿ ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುರುವಾರ ನಡೆದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ಯಾರೂ ಒಂಟಿಯಾಗಿ ಮೊಬೈಲ್ ಬಳಸುತ್ತ ನಿರ್ಜನ ಪ್ರದೇಶದಲ್ಲಿ ತಿರುಗಾಡಬಾರದು. ಹೊಲ, ಗದ್ದೆಗಳ ಕೆಲಸಕ್ಕೆ ಕನಿಷ್ಠ ಇಬ್ಬರು ಸೇರಿ ಹೋಗಬೇಕು. ಕುಡಗೋಲು, ಕೊಡಲಿಯಂಥ ಆಯುಧ ತೆಗೆದುಕೊಂಡು ಹೋಗಬೇಕು’ ಎಂದರು.</p>.<p>‘ಗುಡ್ಡದ ಪಾತ್ರದಲ್ಲಿ ಮನೆ ಇರುವವರು ಮಕ್ಕಳನ್ನು ಹೊರಗೆ ಬಿಡದೆ ಅವರ ಮೇಲೆ ಗಮನ ಇಡಬೇಕು. ಜಾಗ್ರತೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿ ಹೇಳಿದರು.</p>.<p>ಆನೆಗೊಂದಿ ಹಾಗೂ ಸಣಾಪುರ ಗ್ರಾಮಗಳಲ್ಲಿ ಸಾಹಿತಿ ರಮೇಶ ಗಬ್ಬೂರು ತಂಡ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.</p>.<p>ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಪ್ಪ, ಆನೆಗೊಂದಿ ಹಾಗೂ ಸಣಾಪುರ ಪಿಡಿಒಗಳಾದ ಕೃಷ್ಣಪ್ಪ, ಬಸವರಾಜ ಗೌಡರ್, ಕರ ವಸೂಲಿಗಾರ ರಾಘವೇಂದ್ರ, ಹಾಗೂ ಚಾರಣ ಬಳಗದ ಡಾ.ಶಿವಕುಮಾರ ಮಾಲಿಪಾಟೀಲ ಹಾಗೂ ಮಂಜುನಾಥ ಗುಡ್ಲಾನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ‘ತಾಲ್ಲೂಕಿನಲ್ಲಿ ಚಿರತೆ ಉಪಟಳ ಹೆಚ್ಚಿದೆ. ಇಬ್ಬರು ಯುವಕರು ಬಲಿಯಾಗಿದ್ದಾರೆ. ಸಂಜೆ ವೇಳೆ ಗ್ರಾಮಸ್ಥರು ಒಬ್ಬೊಬ್ಬರೇ ತಿರುಗಾಡಬಾರದು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್ ರಫಿ ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುರುವಾರ ನಡೆದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ಯಾರೂ ಒಂಟಿಯಾಗಿ ಮೊಬೈಲ್ ಬಳಸುತ್ತ ನಿರ್ಜನ ಪ್ರದೇಶದಲ್ಲಿ ತಿರುಗಾಡಬಾರದು. ಹೊಲ, ಗದ್ದೆಗಳ ಕೆಲಸಕ್ಕೆ ಕನಿಷ್ಠ ಇಬ್ಬರು ಸೇರಿ ಹೋಗಬೇಕು. ಕುಡಗೋಲು, ಕೊಡಲಿಯಂಥ ಆಯುಧ ತೆಗೆದುಕೊಂಡು ಹೋಗಬೇಕು’ ಎಂದರು.</p>.<p>‘ಗುಡ್ಡದ ಪಾತ್ರದಲ್ಲಿ ಮನೆ ಇರುವವರು ಮಕ್ಕಳನ್ನು ಹೊರಗೆ ಬಿಡದೆ ಅವರ ಮೇಲೆ ಗಮನ ಇಡಬೇಕು. ಜಾಗ್ರತೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿ ಹೇಳಿದರು.</p>.<p>ಆನೆಗೊಂದಿ ಹಾಗೂ ಸಣಾಪುರ ಗ್ರಾಮಗಳಲ್ಲಿ ಸಾಹಿತಿ ರಮೇಶ ಗಬ್ಬೂರು ತಂಡ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.</p>.<p>ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಪ್ಪ, ಆನೆಗೊಂದಿ ಹಾಗೂ ಸಣಾಪುರ ಪಿಡಿಒಗಳಾದ ಕೃಷ್ಣಪ್ಪ, ಬಸವರಾಜ ಗೌಡರ್, ಕರ ವಸೂಲಿಗಾರ ರಾಘವೇಂದ್ರ, ಹಾಗೂ ಚಾರಣ ಬಳಗದ ಡಾ.ಶಿವಕುಮಾರ ಮಾಲಿಪಾಟೀಲ ಹಾಗೂ ಮಂಜುನಾಥ ಗುಡ್ಲಾನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>