<p>ಕೊಪ್ಪಳ: ನಮ್ಮ ಸ್ವತ್ತಾದ ಯಾವುದೇ ವಸ್ತುಗಳಿಗೆ ನಾವೇ ಜವಾಬ್ದಾರರಾಗಿರಬೇಕು. ನಮ್ಮ ಜವಾಬ್ದಾರಿಯನ್ನು ಇನ್ನೊಬ್ಬರ ಮೇಲೆ ಹಾಕಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಹೇಳಿದರು.</p>.<p>ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ 2020 ಮತ್ತು 2021ನೇ ಸಾಲಿನಲ್ಲಿ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತನ್ನು ವಾರಸುದಾರಿರಗೆ ಹಿಂದಿರುಗಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ಯಾವುದೇ ಊರಿಗೆ, ಮದುವೆ ಮತ್ತು ಜಾತ್ರೆಗಳಿಗೆ ಹೋಗುವಾಗ ತಮ್ಮ ಮನೆ ಮತ್ತು ಇತರ ಸ್ವತ್ತಿನ ಕುರಿತು ಎಚ್ಚರಿಕೆಯಿಂದ ಇರಬೇಕು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಿ ಸಾರ್ವಜನಿಕರು ಮೋಸ ಹೋಗಬಾರದು ಎಂದರು.</p>.<p>ನಮ್ಮ ಅಧಿಕಾರಿಗಳ ಶ್ರಮದಿಂದ ಕಾನೂನು ಬದ್ದವಾಗಿ ವಶಪಡಿಸಿಕೊಂಡಿರುವ ಕಳ್ಳತನವಾದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸುತ್ತಿದ್ದು, 2020 ಮತ್ತು 2021 ರ ಅಕ್ಟೋಬರ್ ಮಾಹೆವರೆಗಿನ ಕೊಪ್ಪಳ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವರದಿಯಾಗಿದ್ದ ಸ್ವತ್ತಿನ ಪ್ರಕರಣಗಳನ್ನು ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಪ್ರಾಮಾಣಿಕ ಪ್ರಯತ್ನದಿಂದ ಪತ್ತೆ ಮಾಡಲಾಗಿದೆ ಎಂದರು.</p>.<p>ನಮ್ಮ ಬೆರಳಚ್ಚು ಅಧಿಕಾರಿಯಾದ ಚಂದ್ರಶೇಖರ್ ಅವರು ಸ್ವಯಂ ಆಸಕ್ತಿಯಿಂದ ಹಲವಾರು ಪ್ರಕರಣಗಳನ್ನು ಭೇದಿಸಲು ವಿಶೇಷ ಆಸಕ್ತಿ ತೋರಿಸಿದ್ದಾರೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈಗಾಗಲೇ ಸೂಕ್ತ ಬಹುಮಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.</p>.<p>ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಮಾತನಾಡಿ, ಪೊಲೀಸರು ಹಗಲಿರುಳು ಶ್ರಮಪಟ್ಟು ಪ್ರಕರಣಗಳನ್ನು ಬೇಧಿಸುತ್ತಾರೆ. ಇಂತಹ ಪ್ರಕರಣಗಳಲ್ಲಿ ಸಾರ್ವಜನಿಕರ ಸಹಕಾರವು ನಮಗೆ ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬಸ್ಸುಗಳಲ್ಲಿ ಜನರನ್ನು ಯಾಮಾರಿಸಿ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಈ ಕುರಿತು ಎಚ್ಚರದಿಂದ ಇರಬೇಕು ಎಂದರು.</p>.<p>ಸ್ವತ್ತಿನ ವಾರಸುದಾರರಾದ ಗಂಗಾ ಹನುಮಂತಪ್ಪ ಗಡಗಿ ಮಾತನಾಡಿ, ನಮ್ಮ ಮನೆಯಲ್ಲಿ ಕಳ್ಳತನವಾದಾಗ ಪೋಲಿಸರಿಗೆ ಕರೆ ಮಾಡಿದೆ. ಅವರು ಬಂದು ಯಾರ ಮೇಲೆ ಸಂಶಯವಿದೆ ಎಂದರು. ಒಬ್ಬರ ಹೆಸರನ್ನು ಹೇಳಿದ 2 ತಾಸಿನಲ್ಲಿ ಅವನನ್ನು ಹಿಡಿದರು ಎಂದು ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದರು.</p>.<p>ಇನ್ನೊಬ್ಬ ವಾರಸುದಾರರಾದ ವೆಂಕಟೇಶ ಅಮರ ಜ್ಯೋತಿ ಮಾತನಾಡಿ, ನಮ್ಮ ಮನೆಯಲ್ಲಿ ಕೆಲಸ ಮಾಡುವವನೇ ಕಳ್ಳತನ ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದರು. ಹಾಗಾಗಿ ನಾವು ಯಾವಾಗಲೂ ಎಚ್ಚರದಿಂದ ಇರಬೇಕು ಎಂದರು.</p>.<p>ಡಿವೈಎಸ್ಪಿ ಗೀತಾ ಬೇನಾಳ, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಪೊಲೀಸ್ ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೆಬಲ್ಗಳುಮತ್ತು ಸ್ವತ್ತಿನ ವಾರಸುದಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ನಮ್ಮ ಸ್ವತ್ತಾದ ಯಾವುದೇ ವಸ್ತುಗಳಿಗೆ ನಾವೇ ಜವಾಬ್ದಾರರಾಗಿರಬೇಕು. ನಮ್ಮ ಜವಾಬ್ದಾರಿಯನ್ನು ಇನ್ನೊಬ್ಬರ ಮೇಲೆ ಹಾಕಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಹೇಳಿದರು.</p>.<p>ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ 2020 ಮತ್ತು 2021ನೇ ಸಾಲಿನಲ್ಲಿ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತನ್ನು ವಾರಸುದಾರಿರಗೆ ಹಿಂದಿರುಗಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ಯಾವುದೇ ಊರಿಗೆ, ಮದುವೆ ಮತ್ತು ಜಾತ್ರೆಗಳಿಗೆ ಹೋಗುವಾಗ ತಮ್ಮ ಮನೆ ಮತ್ತು ಇತರ ಸ್ವತ್ತಿನ ಕುರಿತು ಎಚ್ಚರಿಕೆಯಿಂದ ಇರಬೇಕು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಿ ಸಾರ್ವಜನಿಕರು ಮೋಸ ಹೋಗಬಾರದು ಎಂದರು.</p>.<p>ನಮ್ಮ ಅಧಿಕಾರಿಗಳ ಶ್ರಮದಿಂದ ಕಾನೂನು ಬದ್ದವಾಗಿ ವಶಪಡಿಸಿಕೊಂಡಿರುವ ಕಳ್ಳತನವಾದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸುತ್ತಿದ್ದು, 2020 ಮತ್ತು 2021 ರ ಅಕ್ಟೋಬರ್ ಮಾಹೆವರೆಗಿನ ಕೊಪ್ಪಳ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವರದಿಯಾಗಿದ್ದ ಸ್ವತ್ತಿನ ಪ್ರಕರಣಗಳನ್ನು ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಪ್ರಾಮಾಣಿಕ ಪ್ರಯತ್ನದಿಂದ ಪತ್ತೆ ಮಾಡಲಾಗಿದೆ ಎಂದರು.</p>.<p>ನಮ್ಮ ಬೆರಳಚ್ಚು ಅಧಿಕಾರಿಯಾದ ಚಂದ್ರಶೇಖರ್ ಅವರು ಸ್ವಯಂ ಆಸಕ್ತಿಯಿಂದ ಹಲವಾರು ಪ್ರಕರಣಗಳನ್ನು ಭೇದಿಸಲು ವಿಶೇಷ ಆಸಕ್ತಿ ತೋರಿಸಿದ್ದಾರೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈಗಾಗಲೇ ಸೂಕ್ತ ಬಹುಮಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.</p>.<p>ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಮಾತನಾಡಿ, ಪೊಲೀಸರು ಹಗಲಿರುಳು ಶ್ರಮಪಟ್ಟು ಪ್ರಕರಣಗಳನ್ನು ಬೇಧಿಸುತ್ತಾರೆ. ಇಂತಹ ಪ್ರಕರಣಗಳಲ್ಲಿ ಸಾರ್ವಜನಿಕರ ಸಹಕಾರವು ನಮಗೆ ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬಸ್ಸುಗಳಲ್ಲಿ ಜನರನ್ನು ಯಾಮಾರಿಸಿ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಈ ಕುರಿತು ಎಚ್ಚರದಿಂದ ಇರಬೇಕು ಎಂದರು.</p>.<p>ಸ್ವತ್ತಿನ ವಾರಸುದಾರರಾದ ಗಂಗಾ ಹನುಮಂತಪ್ಪ ಗಡಗಿ ಮಾತನಾಡಿ, ನಮ್ಮ ಮನೆಯಲ್ಲಿ ಕಳ್ಳತನವಾದಾಗ ಪೋಲಿಸರಿಗೆ ಕರೆ ಮಾಡಿದೆ. ಅವರು ಬಂದು ಯಾರ ಮೇಲೆ ಸಂಶಯವಿದೆ ಎಂದರು. ಒಬ್ಬರ ಹೆಸರನ್ನು ಹೇಳಿದ 2 ತಾಸಿನಲ್ಲಿ ಅವನನ್ನು ಹಿಡಿದರು ಎಂದು ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದರು.</p>.<p>ಇನ್ನೊಬ್ಬ ವಾರಸುದಾರರಾದ ವೆಂಕಟೇಶ ಅಮರ ಜ್ಯೋತಿ ಮಾತನಾಡಿ, ನಮ್ಮ ಮನೆಯಲ್ಲಿ ಕೆಲಸ ಮಾಡುವವನೇ ಕಳ್ಳತನ ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದರು. ಹಾಗಾಗಿ ನಾವು ಯಾವಾಗಲೂ ಎಚ್ಚರದಿಂದ ಇರಬೇಕು ಎಂದರು.</p>.<p>ಡಿವೈಎಸ್ಪಿ ಗೀತಾ ಬೇನಾಳ, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಪೊಲೀಸ್ ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೆಬಲ್ಗಳುಮತ್ತು ಸ್ವತ್ತಿನ ವಾರಸುದಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>