<p><strong>ಕುಕನೂರು:</strong> ‘ಭಾಷೆ ಜೀವನ ರೂಪಿಸುವುದಿಲ್ಲ. ಜನರು ಇಂಗ್ಲಿಷ್ ಮೇಲಿನ ವ್ಯಾಮೋಹ ಬಿಟ್ಟು, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತಾಗಬೇಕು’ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಕೈಗಾರಿಕಾ ಕೇಂದ್ರ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರು ಇಂಗ್ಲಿಷ್ ವ್ಯಾಮೋಹ ಬಿಟ್ಟು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು. ಜನರ ಬೇಡಿಕೆಯಂತೆ ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ಅನ್ನು ಆರಂಭಿಸುತ್ತಿದೆ. ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಎಲ್ಕೆಜಿಯಿಂದ ಪಿಯುವರೆಗೂ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಮಾಧ್ಯಮದಲ್ಲಿ ಓದಿಸಬಹುದು’ ಎಂದು ಹೇಳಿದರು.</p>.<p>‘ಜ್ಞಾನಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯಿರಿ. ಆದರೆ ಕನ್ನಡ ಭಾಷೆಯಿಂದ ದೂರ ಸರಿಯಬೇಡಿ. ರಾಜ್ಯ ಸರ್ಕಾರದಿಂದ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಯಲಬುರ್ಗಾ ತಾಲ್ಲೂಕಿಗೆ ಆರು ಪಬ್ಲಿಕ್ ಶಾಲೆಗಳನ್ನು ಈ ವರ್ಷದಿಂದ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.</p>.<p>₹25 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೂ ಡೈಯಾಸ್, ಡೆಸ್ಕ್ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು. ಕೇವಲ ಎರಡು ವರ್ಷಗಳ ಅವಧಿಯಲ್ಲಿ 18 ಪ್ರೌಢಶಾಲೆಗಳನ್ನು ಮಂಜೂರು ಮಾಡಿಸಿ, ನಿರ್ಮಿಸಿ ಈಗಾಗಲೇ ಪ್ರಾರಂಭಿಸಿದ್ದೇವೆ. ಪ್ರತಿ ವರ್ಷ ಶಿಕ್ಷಣ ಇಲಾಖೆಗೆ ₹42 ಸಾವಿರ ಕೋಟಿ ಬಜೆಟ್ ಮಂಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಕೆರಿಬಸಪ್ಪ ನಿಡುಗುಂದಿ, ಹನುಮಂತ ಗೌಡ ಚಂಡೂರ, ಇಒ ಸಂತೋಷ ಪಾಟೀಲ ಬಿರಾದಾರ, ಮಂಗಳೂರು ಗ್ರಾ.ಪಂ ಅಧ್ಯಕ್ಷ ಸಕ್ರಪ್ಪ, ತಹಶೀಲ್ದಾರ ಪ್ರಾಣೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ, ಎಸ್.ಎಂ.ದೇಸಾಯಿ, ಅಶೋಕ್ ತೋಟದ, ಅಪ್ಪಣ್ಣ ಜೋಶಿ, ಈರಣ್ಣ ಹಳ್ಳಿಕೇರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ‘ಭಾಷೆ ಜೀವನ ರೂಪಿಸುವುದಿಲ್ಲ. ಜನರು ಇಂಗ್ಲಿಷ್ ಮೇಲಿನ ವ್ಯಾಮೋಹ ಬಿಟ್ಟು, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತಾಗಬೇಕು’ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಕೈಗಾರಿಕಾ ಕೇಂದ್ರ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರು ಇಂಗ್ಲಿಷ್ ವ್ಯಾಮೋಹ ಬಿಟ್ಟು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು. ಜನರ ಬೇಡಿಕೆಯಂತೆ ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ಅನ್ನು ಆರಂಭಿಸುತ್ತಿದೆ. ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಎಲ್ಕೆಜಿಯಿಂದ ಪಿಯುವರೆಗೂ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಮಾಧ್ಯಮದಲ್ಲಿ ಓದಿಸಬಹುದು’ ಎಂದು ಹೇಳಿದರು.</p>.<p>‘ಜ್ಞಾನಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯಿರಿ. ಆದರೆ ಕನ್ನಡ ಭಾಷೆಯಿಂದ ದೂರ ಸರಿಯಬೇಡಿ. ರಾಜ್ಯ ಸರ್ಕಾರದಿಂದ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಯಲಬುರ್ಗಾ ತಾಲ್ಲೂಕಿಗೆ ಆರು ಪಬ್ಲಿಕ್ ಶಾಲೆಗಳನ್ನು ಈ ವರ್ಷದಿಂದ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.</p>.<p>₹25 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೂ ಡೈಯಾಸ್, ಡೆಸ್ಕ್ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು. ಕೇವಲ ಎರಡು ವರ್ಷಗಳ ಅವಧಿಯಲ್ಲಿ 18 ಪ್ರೌಢಶಾಲೆಗಳನ್ನು ಮಂಜೂರು ಮಾಡಿಸಿ, ನಿರ್ಮಿಸಿ ಈಗಾಗಲೇ ಪ್ರಾರಂಭಿಸಿದ್ದೇವೆ. ಪ್ರತಿ ವರ್ಷ ಶಿಕ್ಷಣ ಇಲಾಖೆಗೆ ₹42 ಸಾವಿರ ಕೋಟಿ ಬಜೆಟ್ ಮಂಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಕೆರಿಬಸಪ್ಪ ನಿಡುಗುಂದಿ, ಹನುಮಂತ ಗೌಡ ಚಂಡೂರ, ಇಒ ಸಂತೋಷ ಪಾಟೀಲ ಬಿರಾದಾರ, ಮಂಗಳೂರು ಗ್ರಾ.ಪಂ ಅಧ್ಯಕ್ಷ ಸಕ್ರಪ್ಪ, ತಹಶೀಲ್ದಾರ ಪ್ರಾಣೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ, ಎಸ್.ಎಂ.ದೇಸಾಯಿ, ಅಶೋಕ್ ತೋಟದ, ಅಪ್ಪಣ್ಣ ಜೋಶಿ, ಈರಣ್ಣ ಹಳ್ಳಿಕೇರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>