ಅಧ್ಯಕ್ಷತೆ ವಹಿಸಿದ್ದ ಪರಿಷತ್ತಿನ ಅಧ್ಯಕ್ಷ ವೀರೇಶ ಬಂಗಾರಶೆಟ್ಟರ, ದತ್ತಿದಾನಿಗಳ ಸಂಖ್ಯೆ ಹೆಚ್ಚಿದರೆ ಕನ್ನಡ ಸಾಹಿತ್ಯ, ಪರಂಪರೆ, ಸಂಸ್ಕೃತಿ, ಇತಿಹಾಸ, ಸ್ವಾತಂತ್ರ್ಯ ಹೋರಾಟ ಇಂಥ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಅನುಕೂಲವಾಗುತ್ತದೆ. ಕೇವಲ ₹25 ಸಾವಿರ ದತ್ತಿ ನಿಧಿ ನೀಡಿದರೆ ಸಾಹಿತ್ಯ ಪರಿಷತ್ ಅಸ್ತಿತ್ವದಲ್ಲಿ ಇರುವವರೆಗೂ ಪ್ರತಿ ವರ್ಷ ತಮ್ಮ ಹಿರಿಯರ ಸ್ಮರಣಾರ್ಥ ವಿವಿಧ ವಿಷಯಗಳ ಮೇಲೆ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದರು.