<p><strong>ಕನಕಗಿರಿ</strong>: ಬೇಸಿಗೆಯಲ್ಲಿ ಕೂಲಿಕಾರರು ಗುಳೆ ಹೋಗದೇ ತಮ್ಮ ಊರಲ್ಲಿಯೇ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ ಹೇಳಿದರು.</p>.<p>ತಾಲ್ಲೂಕಿನ ಹಿರೇಖೇಡ ಗ್ರಾಮದಲ್ಲಿ ನಡೆದ ಕೆರೆ ಹೂಳೆತ್ತುವ ಕೆಲಸದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>ನರೇಗಾ ಕೂಲಿಕಾರರಿಗೆ ಬೇಸಿಗೆ ಇರುವ ಕಾರಣ ಸತತ ಮೂರು ತಿಂಗಳ ಕಾಲ ಗ್ರಾ.ಪಂ ವತಿಯಿಂದ ಕೆಲಸ ನೀಡಲಾಗುತ್ತದೆ. ಅಲ್ಲದೇ, ಪ್ರತಿನಿತ್ಯ ತಮಗೆ ನೀಡಿರುವ ಕೆಲಸದ ಅಳತೆಗನುಸಾರವಾಗಿ ಕೆಲಸ ಮಾಡಿದರೆ ಪೂರ್ತಿ ಕೂಲಿ ಹಣ ಸಿಗಲಿದೆ ಎಂದರು.</p>.<p>ಇದೇ ಸಮಯದಲ್ಲಿ ನರೇಗಾ ಸಹಾಯವಾಣಿ ಸಂಖ್ಯೆ, ಪಿಎಂಜೆಜೆವೈ ಹಾಗೂ ಪಿಎಂಎಸ್ಬಿವೈ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.</p>.<p>ಐಇಸಿ ಸಂಯೋಜಕ ಶಿವಕುಮಾರ ಕೆ. ಮಾತನಾಡಿ, ‘ಏ.1ರಿಂದ ಪರಿಷ್ಕೃತ ನರೇಗಾ ಕೂಲಿ ಮೊತ್ತ ₹349 ರಿಂದ ₹370ಗೆ ಹೆಚ್ಚಳವಾಗಿದೆ’ ಎಂದು ತಿಳಿಸಿದರು.</p>.<p>ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್ ಮಾತನಾಡಿದರು.</p>.<p>ಗ್ರಾ.ಪಂ ಸದಸ್ಯರಾದ ಬಾರಿಮರದಪ್ಪ, ಭೀಮನಗೌಡ, ಪ್ರಮುಖರಾದ ಹುಲುಗಪ್ಪ ದೊಡ್ಡಮನಿ, ಬಾರಿಮರದಪ್ಪ ನಡುಲಮನಿ, ಶಾಮಣ್ಣ ಶಿರವಾರ, ಶಿವಕುಮಾರ್ ಬಡಿಗೇರ್, ಭೀಮನಗೌಡ ಗುಡದೂರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಬೇಸಿಗೆಯಲ್ಲಿ ಕೂಲಿಕಾರರು ಗುಳೆ ಹೋಗದೇ ತಮ್ಮ ಊರಲ್ಲಿಯೇ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ ಹೇಳಿದರು.</p>.<p>ತಾಲ್ಲೂಕಿನ ಹಿರೇಖೇಡ ಗ್ರಾಮದಲ್ಲಿ ನಡೆದ ಕೆರೆ ಹೂಳೆತ್ತುವ ಕೆಲಸದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>ನರೇಗಾ ಕೂಲಿಕಾರರಿಗೆ ಬೇಸಿಗೆ ಇರುವ ಕಾರಣ ಸತತ ಮೂರು ತಿಂಗಳ ಕಾಲ ಗ್ರಾ.ಪಂ ವತಿಯಿಂದ ಕೆಲಸ ನೀಡಲಾಗುತ್ತದೆ. ಅಲ್ಲದೇ, ಪ್ರತಿನಿತ್ಯ ತಮಗೆ ನೀಡಿರುವ ಕೆಲಸದ ಅಳತೆಗನುಸಾರವಾಗಿ ಕೆಲಸ ಮಾಡಿದರೆ ಪೂರ್ತಿ ಕೂಲಿ ಹಣ ಸಿಗಲಿದೆ ಎಂದರು.</p>.<p>ಇದೇ ಸಮಯದಲ್ಲಿ ನರೇಗಾ ಸಹಾಯವಾಣಿ ಸಂಖ್ಯೆ, ಪಿಎಂಜೆಜೆವೈ ಹಾಗೂ ಪಿಎಂಎಸ್ಬಿವೈ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.</p>.<p>ಐಇಸಿ ಸಂಯೋಜಕ ಶಿವಕುಮಾರ ಕೆ. ಮಾತನಾಡಿ, ‘ಏ.1ರಿಂದ ಪರಿಷ್ಕೃತ ನರೇಗಾ ಕೂಲಿ ಮೊತ್ತ ₹349 ರಿಂದ ₹370ಗೆ ಹೆಚ್ಚಳವಾಗಿದೆ’ ಎಂದು ತಿಳಿಸಿದರು.</p>.<p>ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್ ಮಾತನಾಡಿದರು.</p>.<p>ಗ್ರಾ.ಪಂ ಸದಸ್ಯರಾದ ಬಾರಿಮರದಪ್ಪ, ಭೀಮನಗೌಡ, ಪ್ರಮುಖರಾದ ಹುಲುಗಪ್ಪ ದೊಡ್ಡಮನಿ, ಬಾರಿಮರದಪ್ಪ ನಡುಲಮನಿ, ಶಾಮಣ್ಣ ಶಿರವಾರ, ಶಿವಕುಮಾರ್ ಬಡಿಗೇರ್, ಭೀಮನಗೌಡ ಗುಡದೂರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>