ಗುಬ್ಬಿವೀರಣ್ಣ ಪ್ರಶಸ್ತಿ ಪುರಸ್ಕೃತರಾದ ಚಿಂದೋಡಿ ಶ್ರೀಕಂಠೇಶ ಅವರು ಕೆ.ಬಿ.ಆರ್.ಡ್ರಾಮಾ ಕಂಪನಿಯ ಮಾಲೀಕರಾಗಿ, ನಟರಾಗಿ, ನಿರ್ದೇಶಕರಾಗಿ, ನಾಟಕ ರಚನೆಕಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಕ್ಕಳಾದ ಚಿಂದೋಡಿ ವಿಜಯಕುಮಾರ, ಚಿಂದೋಡಿ ಕಿಶೋರಕುಮಾರ ಸೇರಿದಂತೆ ಇಡೀ ಕುಟುಂಬವೇ ರಂಗಭೂಮಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದೆ ಎಂದು ಹೇಳಿದರು.