ಗಂಗಾವತಿ: 2018-19ನೇ ಸಾಲಿನ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ಕ್ಕೆ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಆಯ್ಕೆಯಾಗಿದ್ದಾರೆ.
ಜನವರಿ 7 ರಂದು ಬೆಂಗಳೂರಿನ ಗಾಜಿನ ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ.
ಅವರು 22 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರಿಯಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸೇವಾ ಹಿರಿತನ ಹಾಗೂ ಕಾರ್ಯದಕ್ಷತೆ ಪರಿಗಣಿಸಿ ಅವರನ್ನು ಪದಕಕ್ಕೆ ಆಯ್ಕೆ ಮಾಡಲಾಗಿದೆ.