<p><strong>ಗಂಗಾವತಿ</strong>: ತಾಲ್ಲೂಕಿನ ಬಸಾಪಟ್ಟಣದ ಯುವ ರೈತ ರಾಘವೇಂದ್ರ ಅವರು ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಎರೆಹುಳು ಕೃಷಿ ಮಾಡಿ ಕೈತುಂಬಾ ಆದಾಯ ಗಳಿಸಿದ್ದಾರೆ. ಈ ಮೂಲಕ ಇತರ ರೈತರಿಗೂ ಮಾದರಿಯಾಗಿದ್ದಾರೆ.</p>.<p>ಪ್ರಸ್ತುತ ರೈತರು ತೋಟಗಾರಿಕಾ ಬೆಳೆಗಳಿಗೆ ಮಾರುಕಟ್ಟೆ ಹಾಗೂ ದರ ಸಿಗದೆ ಕಂಗಾಲಾಗಿದ್ದಾರೆ.</p>.<p>ಆದರೆ, ರಾಘವೇಂದ್ರ ಅವರು ತೋಟಗಾರಿಕಾ ಬೆಳೆಗಾರರಿಗೆ ಇದ್ದಲ್ಲಿಯೇ ಎರೆಹುಳು ಗೊಬ್ಬರ ಮಾರಾಟ ಮಾಡುತ್ತಿದ್ದಾರೆ.</p>.<p>ಆರು ತಿಂಗಳ ಹಿಂದೆ ಎರೆಹುಳು ಗೊಬ್ಬರ ಉತ್ಪಾದನೆಯ ಕುರಿತು ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಇತರ ರೈತರಿಂದ ತಾಂತ್ರಿಕ ಸಲಹೆ ಪಡೆದಿದ್ದಾರೆ. ₹2 ಲಕ್ಷ ವೆಚ್ಚದಲ್ಲಿ ತಾವೇ ಎರೆಹುಳು ಘಟಕ ಸ್ಥಾಪಿಸಿದ್ದಾರೆ. ಮೂರು ತಿಂಗಳಲ್ಲಿ 8 ಟನ್ ಗೊಬ್ಬರ ಮಾರಾಟ ಮಾಡಿದ್ದಾರೆ.</p>.<p>ಎರೆಹುಳು ಗೊಬ್ಬರಕ್ಕೆ ಟ್ರೈಕೊಡರ್ಮ, ಪೆಸಿಲೋಮಿಸಿಸ್ ಮತ್ತು ಸ್ಯೂಡೋಮೊನಾಸ್ ಮೌಲ್ಯವರ್ಧನೆ ಮಾಡಿ ಅದನ್ನು ಕೆ.ಜಿ ಗೆ ₹11 ರಂತೆ ಮಾರಾಟ ಮಾಡುತ್ತಿದ್ದಾರೆ.</p>.<p>ಆರು ಲಕ್ಷ ಆದಾಯ ಗಳಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಭತ್ತಕ್ಕೆ ಪರ್ಯಾಯವಾಗಿ ಉಪ ಕಸುಬುಗಳನ್ನು ಮಾಡುವುದರಿಂದ ಆದಾಯ ವೃದ್ಧಿಸಿಕೊಳ್ಳಬಹುದು ಎಂದು ಇತರರಿಗೆ ತೋರಿಸಿ ಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಬಸಾಪಟ್ಟಣದ ಯುವ ರೈತ ರಾಘವೇಂದ್ರ ಅವರು ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಎರೆಹುಳು ಕೃಷಿ ಮಾಡಿ ಕೈತುಂಬಾ ಆದಾಯ ಗಳಿಸಿದ್ದಾರೆ. ಈ ಮೂಲಕ ಇತರ ರೈತರಿಗೂ ಮಾದರಿಯಾಗಿದ್ದಾರೆ.</p>.<p>ಪ್ರಸ್ತುತ ರೈತರು ತೋಟಗಾರಿಕಾ ಬೆಳೆಗಳಿಗೆ ಮಾರುಕಟ್ಟೆ ಹಾಗೂ ದರ ಸಿಗದೆ ಕಂಗಾಲಾಗಿದ್ದಾರೆ.</p>.<p>ಆದರೆ, ರಾಘವೇಂದ್ರ ಅವರು ತೋಟಗಾರಿಕಾ ಬೆಳೆಗಾರರಿಗೆ ಇದ್ದಲ್ಲಿಯೇ ಎರೆಹುಳು ಗೊಬ್ಬರ ಮಾರಾಟ ಮಾಡುತ್ತಿದ್ದಾರೆ.</p>.<p>ಆರು ತಿಂಗಳ ಹಿಂದೆ ಎರೆಹುಳು ಗೊಬ್ಬರ ಉತ್ಪಾದನೆಯ ಕುರಿತು ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಇತರ ರೈತರಿಂದ ತಾಂತ್ರಿಕ ಸಲಹೆ ಪಡೆದಿದ್ದಾರೆ. ₹2 ಲಕ್ಷ ವೆಚ್ಚದಲ್ಲಿ ತಾವೇ ಎರೆಹುಳು ಘಟಕ ಸ್ಥಾಪಿಸಿದ್ದಾರೆ. ಮೂರು ತಿಂಗಳಲ್ಲಿ 8 ಟನ್ ಗೊಬ್ಬರ ಮಾರಾಟ ಮಾಡಿದ್ದಾರೆ.</p>.<p>ಎರೆಹುಳು ಗೊಬ್ಬರಕ್ಕೆ ಟ್ರೈಕೊಡರ್ಮ, ಪೆಸಿಲೋಮಿಸಿಸ್ ಮತ್ತು ಸ್ಯೂಡೋಮೊನಾಸ್ ಮೌಲ್ಯವರ್ಧನೆ ಮಾಡಿ ಅದನ್ನು ಕೆ.ಜಿ ಗೆ ₹11 ರಂತೆ ಮಾರಾಟ ಮಾಡುತ್ತಿದ್ದಾರೆ.</p>.<p>ಆರು ಲಕ್ಷ ಆದಾಯ ಗಳಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಭತ್ತಕ್ಕೆ ಪರ್ಯಾಯವಾಗಿ ಉಪ ಕಸುಬುಗಳನ್ನು ಮಾಡುವುದರಿಂದ ಆದಾಯ ವೃದ್ಧಿಸಿಕೊಳ್ಳಬಹುದು ಎಂದು ಇತರರಿಗೆ ತೋರಿಸಿ ಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>