<p><strong>ಗಂಗಾವತಿ:</strong> ‘ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದತ್ತ ಗಮನ ಹರಿಸಬೇಕು‘ ಎಂದು ಕ್ಷಯರೋಗ ಆರೋಗ್ಯ ಪರಿವೀಕ್ಷಕ ಮಲ್ಲಿಕಾರ್ಜುನ ತಿಳಿಸಿದರು.</p>.<p>ನಗರದ ತರಕಾರಿ ಮಾರುಕಟ್ಟೆಯ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಿಳೆಯರ ಪೌಷ್ಟಿಕ ಆಹಾರ ಶಿಬಿರದಲ್ಲಿ ಮಾತನಾಡಿದರು.</p>.<p>‘ಪೌಷ್ಟಿಕ ಆಹಾರ ಸೇವನೆ ಮಾಡದಿದ್ದರೆ ಹುಟ್ಟುವ ಮಗುವಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಗರ್ಭಿಣಿಯರು ಪೌಷ್ಟಿಕ ಅಂಶಗಳಿಂದ ಕೂಡಿರುವ ತರಕಾರಿ, ಹಣ್ಣುಗಳನ್ನು ನಿತ್ಯ ಸೇವಿಸಬೇಕು‘ ಎಂದರು.</p>.<p>‘ಕ್ಷಯರೋಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗವಾಗಿದೆ. ಆದ್ದರಿಂದ ಮಹಿಳೆಯರಲ್ಲಿ ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ನಿರಂತರ ಕೆಮ್ಮು, ಜ್ವರದಿಂದ ಬಳಲುತ್ತಿದ್ದರೆ ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕು‘ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಮೇಲ್ವಿಚಾರಕರ ಶಹಿನ್ ಮಾತನಾಡಿದರು.</p>.<p>ಕರ್ನಾಟಕ ಆರೋಗ್ಯ ಸಂವರ್ಧನ ಸಂಸ್ಥೆಯ ಸಂಯೋಜಕಿ ಕಾಶಿಂ ಬಿ, ಅಂಗನವಾಡಿ ಕಾರ್ಯಕರ್ತೆ ಅಮೀನಾ, ಕಾವೇರಿ, ಅನ್ನಪೂರ್ಣ ಸೇರಿದಂತೆ ಗರ್ಭಿಣಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದತ್ತ ಗಮನ ಹರಿಸಬೇಕು‘ ಎಂದು ಕ್ಷಯರೋಗ ಆರೋಗ್ಯ ಪರಿವೀಕ್ಷಕ ಮಲ್ಲಿಕಾರ್ಜುನ ತಿಳಿಸಿದರು.</p>.<p>ನಗರದ ತರಕಾರಿ ಮಾರುಕಟ್ಟೆಯ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಿಳೆಯರ ಪೌಷ್ಟಿಕ ಆಹಾರ ಶಿಬಿರದಲ್ಲಿ ಮಾತನಾಡಿದರು.</p>.<p>‘ಪೌಷ್ಟಿಕ ಆಹಾರ ಸೇವನೆ ಮಾಡದಿದ್ದರೆ ಹುಟ್ಟುವ ಮಗುವಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಗರ್ಭಿಣಿಯರು ಪೌಷ್ಟಿಕ ಅಂಶಗಳಿಂದ ಕೂಡಿರುವ ತರಕಾರಿ, ಹಣ್ಣುಗಳನ್ನು ನಿತ್ಯ ಸೇವಿಸಬೇಕು‘ ಎಂದರು.</p>.<p>‘ಕ್ಷಯರೋಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗವಾಗಿದೆ. ಆದ್ದರಿಂದ ಮಹಿಳೆಯರಲ್ಲಿ ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ನಿರಂತರ ಕೆಮ್ಮು, ಜ್ವರದಿಂದ ಬಳಲುತ್ತಿದ್ದರೆ ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕು‘ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಮೇಲ್ವಿಚಾರಕರ ಶಹಿನ್ ಮಾತನಾಡಿದರು.</p>.<p>ಕರ್ನಾಟಕ ಆರೋಗ್ಯ ಸಂವರ್ಧನ ಸಂಸ್ಥೆಯ ಸಂಯೋಜಕಿ ಕಾಶಿಂ ಬಿ, ಅಂಗನವಾಡಿ ಕಾರ್ಯಕರ್ತೆ ಅಮೀನಾ, ಕಾವೇರಿ, ಅನ್ನಪೂರ್ಣ ಸೇರಿದಂತೆ ಗರ್ಭಿಣಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>