<p>ಯಲಬುರ್ಗಾ: ‘ಸ್ವಸಹಾಯ ಸಂಘಗಳಿಂದ ಆರ್ಥಿಕ ಸದೃಢತೆ ಸಾಧ್ಯ’ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅಭಿಪ್ರಾಯಪಟ್ಟರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ತಾಲ್ಲೂಕು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನ ಹಾಗೂ ಸಂಘಗಳ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋದರೆ ಸಂಘದ ಪ್ರತಿಯೊಬ್ಬರೂ ಆರ್ಥಿಕವಾಗಿ ಸದೃಢರಾಗಬಹುದು. ಸಂಘ ಅಥವಾ ಸಂಸ್ಥೆಗಳು ಅಭಿವೃದ್ಧಿಯಾಗಬೇಕಾದರೆ ಸಾಲ ಮರುಪಾವತಿ ಮುಖ್ಯ. ಸಾಲ ಅಭಿವೃದ್ಧಿಗೆ ಕಾರಣವಾದರೆ ಸಂಘಗಳು ಕೂಡ ಬೆಳೆಯುತ್ತವೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ,‘ಮಾದಕ ವಸ್ತು ಪಿಡುಗು ನಿರ್ಮೂಲನೆಗೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಪಾಲಕರು ಈ ಕುರಿತು ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಯೋಜನಾಧಿಕಾರಿ ಸುಧಾ.ಪಿ ಮಾತನಾಡಿ,‘ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯದ ಕಡೆ ಗಮನ ಕೊಡುವುದು ಅವಶ್ಯಕ. ಯುವಕರು ಆರೋಗ್ಯವಾಗಿದ್ದರೆ ದೇಶ ಸದೃಢವಾಗಿರುತ್ತದೆ’ ಎಂದು ಅವರು ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶಾಂತ ಮಾಟೂರ, ಸದಸ್ಯೆ ಕಲಾವತಿ ಹಾಗೂ ಸದಸ್ಯ ಕಳಕಪ್ಪ ತಳವಾರ ಇದ್ದರು.</p>.<p>ವಲಯ ಮೇಲ್ವಿಚಾರಕಿ ತ್ರಿವೇಣಿ ಬಾವಿಕಟ್ಟಿ ಸ್ವಾಗತಿಸಿ, ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ‘ಸ್ವಸಹಾಯ ಸಂಘಗಳಿಂದ ಆರ್ಥಿಕ ಸದೃಢತೆ ಸಾಧ್ಯ’ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅಭಿಪ್ರಾಯಪಟ್ಟರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ತಾಲ್ಲೂಕು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನ ಹಾಗೂ ಸಂಘಗಳ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋದರೆ ಸಂಘದ ಪ್ರತಿಯೊಬ್ಬರೂ ಆರ್ಥಿಕವಾಗಿ ಸದೃಢರಾಗಬಹುದು. ಸಂಘ ಅಥವಾ ಸಂಸ್ಥೆಗಳು ಅಭಿವೃದ್ಧಿಯಾಗಬೇಕಾದರೆ ಸಾಲ ಮರುಪಾವತಿ ಮುಖ್ಯ. ಸಾಲ ಅಭಿವೃದ್ಧಿಗೆ ಕಾರಣವಾದರೆ ಸಂಘಗಳು ಕೂಡ ಬೆಳೆಯುತ್ತವೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ,‘ಮಾದಕ ವಸ್ತು ಪಿಡುಗು ನಿರ್ಮೂಲನೆಗೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಪಾಲಕರು ಈ ಕುರಿತು ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಯೋಜನಾಧಿಕಾರಿ ಸುಧಾ.ಪಿ ಮಾತನಾಡಿ,‘ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯದ ಕಡೆ ಗಮನ ಕೊಡುವುದು ಅವಶ್ಯಕ. ಯುವಕರು ಆರೋಗ್ಯವಾಗಿದ್ದರೆ ದೇಶ ಸದೃಢವಾಗಿರುತ್ತದೆ’ ಎಂದು ಅವರು ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶಾಂತ ಮಾಟೂರ, ಸದಸ್ಯೆ ಕಲಾವತಿ ಹಾಗೂ ಸದಸ್ಯ ಕಳಕಪ್ಪ ತಳವಾರ ಇದ್ದರು.</p>.<p>ವಲಯ ಮೇಲ್ವಿಚಾರಕಿ ತ್ರಿವೇಣಿ ಬಾವಿಕಟ್ಟಿ ಸ್ವಾಗತಿಸಿ, ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>