<p>ಕೊಪ್ಪಳ: ಅತ್ಯಂತ ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಹೆಸರಾಂತ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಮುಖ್ಯಮಂತ್ರಿಗಳಿಗೆ, ರಾಜ್ಯದ ಎಲ್ಲ ಶಾಸಕರುಹಾಗೂವಿಧಾನ ಪರಿಷತ್ ಸದಸ್ಯರಿಗೆಬಹಿರಂಗ ಪತ್ರ ಬರೆದಿದ್ದಾರೆ.</p>.<p>ರಾಜ್ಯ ಸರ್ಕಾರ ಈ ಕೋವಿಡ್ ಸಂದರ್ಭದಲ್ಲಿ ಯಾವುದೇ ಪ್ರಜಾತಾಂತ್ರಿಕ ಚರ್ಚೆಗಳಿಲ್ಲದೆ ಏಕಪಕ್ಷೀಯವಾಗಿ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪದವಿ ಹಂತದಲ್ಲಿ ತರಲು ನಿರ್ಧರಿಸಿದೆ. ಶಿಕ್ಷಣ ಪ್ರೇಮಿಗಳು ಹಾಗೂ ಶಿಕ್ಷಣ ತಜ್ಞರು ರಾಜ್ಯ ಸರ್ಕಾರದ ಈ ಸರ್ವಾಧಿಕಾರಿ ಧೋರಣೆ ವಿರೋಧಿಸುತ್ತಲೇ ಬಂದಿದ್ದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದುಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಹಾಗೂ ಇತರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಈ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಬ್ಬಶಾಸಕರು ಬಡ ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಇದ್ದಲ್ಲಿ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ವಿರೋಧಿಸಬೇಕು’ ಎಂದುಸಮಿತಿರಾಜ್ಯ ಸೆಕ್ರೆಟರಿಯಟ್ ಸದಸ್ಯಆರ್.ಕೆ.ವೀರಭದ್ರಪ್ಪ ಒತ್ತಾಯಿಸಿದ್ದಾರೆ.</p>.<p>ಶಿಕ್ಷಣ ನೀತಿ-2020 ಅನುಷ್ಠಾನಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಕೂಡಲೇ ಕೈಬಿಡಬೇಕು.</p>.<p>ಪಠ್ಯ ಶಾಸ್ತ್ರ, ಕಲಿಕೆ, ಬೋಧನೆ ಹಾಗೂ ಜ್ಞಾನಾರ್ಜನೆಗೆ ಮಾರಕವಾಗಿರುವ 3/4 ಪದವಿ ಕೋರ್ಸ್ಗಳನ್ನು ರದ್ದುಗೊಳಿಸಬೇಕು ಎಂದು ಅವರು ಈ ವೇಳೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಅತ್ಯಂತ ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಹೆಸರಾಂತ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಮುಖ್ಯಮಂತ್ರಿಗಳಿಗೆ, ರಾಜ್ಯದ ಎಲ್ಲ ಶಾಸಕರುಹಾಗೂವಿಧಾನ ಪರಿಷತ್ ಸದಸ್ಯರಿಗೆಬಹಿರಂಗ ಪತ್ರ ಬರೆದಿದ್ದಾರೆ.</p>.<p>ರಾಜ್ಯ ಸರ್ಕಾರ ಈ ಕೋವಿಡ್ ಸಂದರ್ಭದಲ್ಲಿ ಯಾವುದೇ ಪ್ರಜಾತಾಂತ್ರಿಕ ಚರ್ಚೆಗಳಿಲ್ಲದೆ ಏಕಪಕ್ಷೀಯವಾಗಿ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪದವಿ ಹಂತದಲ್ಲಿ ತರಲು ನಿರ್ಧರಿಸಿದೆ. ಶಿಕ್ಷಣ ಪ್ರೇಮಿಗಳು ಹಾಗೂ ಶಿಕ್ಷಣ ತಜ್ಞರು ರಾಜ್ಯ ಸರ್ಕಾರದ ಈ ಸರ್ವಾಧಿಕಾರಿ ಧೋರಣೆ ವಿರೋಧಿಸುತ್ತಲೇ ಬಂದಿದ್ದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದುಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಹಾಗೂ ಇತರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಈ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಬ್ಬಶಾಸಕರು ಬಡ ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಇದ್ದಲ್ಲಿ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ವಿರೋಧಿಸಬೇಕು’ ಎಂದುಸಮಿತಿರಾಜ್ಯ ಸೆಕ್ರೆಟರಿಯಟ್ ಸದಸ್ಯಆರ್.ಕೆ.ವೀರಭದ್ರಪ್ಪ ಒತ್ತಾಯಿಸಿದ್ದಾರೆ.</p>.<p>ಶಿಕ್ಷಣ ನೀತಿ-2020 ಅನುಷ್ಠಾನಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಕೂಡಲೇ ಕೈಬಿಡಬೇಕು.</p>.<p>ಪಠ್ಯ ಶಾಸ್ತ್ರ, ಕಲಿಕೆ, ಬೋಧನೆ ಹಾಗೂ ಜ್ಞಾನಾರ್ಜನೆಗೆ ಮಾರಕವಾಗಿರುವ 3/4 ಪದವಿ ಕೋರ್ಸ್ಗಳನ್ನು ರದ್ದುಗೊಳಿಸಬೇಕು ಎಂದು ಅವರು ಈ ವೇಳೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>