ಆರೋಗ್ಯ ಆಪ್ತ ಸಮಾಲೋಚಕ ಶರಣಪ್ಪ ಉಪ್ಪಾರ ಮಾತನಾಡಿ,‘ಹದಿಹರೆಯದವರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮುಖ್ಯವಾಗಿ ರಕ್ತಹೀನತೆ, ಪೌಷ್ಟಿಕ ಆಹಾರದ ಕೊರತೆ, ಋತುಚಕ್ರ ಸಂಬಂಧಿ ಸಮಸ್ಯೆಗಳು ಹಾಗೂ ವೈಯಕ್ತಿಕ ಅನಾರೋಗ್ಯ ಮೊದಲಾದವುಗಳು ಅವರನ್ನು ಬಲಹೀನರನ್ನಾಗಿ ಮಾಡುತ್ತವೆ. ಇಂಥ ಸಮಸ್ಯೆಗಳಿಂದ ಮುಕ್ತರಾಗಲು ಸಾಧ್ಯವಿದ್ದು, ವೈದ್ಯರ ಸಲಹೆ ಹಾಗೂ ಆರೋಗ್ಯಪೂರ್ಣ ನಡಾವಳಿಕೆ ಮತ್ತು ಉತ್ತಮ ಆಹಾರ ಸೇವನೆ ಮುಖ್ಯ’ ಎಂದರು.