<p><strong>ಕನಕಗಿರಿ: </strong>ಮುಹಮ್ಮದ್ ಪೈಗಂಬರ್ ಅವರು ಬೋಧಿಸಿದ ಚಿಂತನೆ, ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತ ವಾಗಿವೆ. ಯುವ ಸಮುದಾಯ ಇಂಥ ಉದಾತ್ತ ಚಿಂತನೆ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಮೌಲಾನ್ ಮಹ್ಮದ ಸಜ್ಜಾದ ರಜಾ ನೂರಿ ತಿಳಿಸಿದರು.</p>.<p>ಇಲ್ಲಿನ ಜಾಮೀಯಾ ಮಸೀದಿಯಲ್ಲಿ ಮಂಗಳವಾರ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣವಿಲ್ಲದೆ ಯಾವ ಸಮಾಜವೂ ಕೂಡ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎಂಬುದನ್ನು ಮುಸ್ಲಿಂರು ಮೊದಲು ಅರಿತು ಕೊಳ್ಳಬೇಕು. ಅಂದಾಗ ಮಾತ್ರ ಸುಧಾರಣೆಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.</p>.<p>ಸರ್ಕಾರ ಎಲ್ಲಾ ವರ್ಗದ ಜನರಿಗೆ ವಿವಿಧ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಇಂಥ ಸೌಕರ್ಯಗಳನ್ನು ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕಗಿ ಸಬಲರಾಗಬೇಕು ಹೇಳಿದರು.</p>.<p>ಪ್ರಮುಖ ಚಂದುಸಾಬ ಸೂಳೇಕಲ್ ಅವರು ಕುರಾನ್ ಪಠಣ ಹಾಗೂ ಈದ್ಮಿಲಾದ ಹಬ್ಬದ ಆಚರಣೆಯ ಮಹತ್ವ ಕುರಿತು ತಿಳಿಸಿದರು. ಮಸೀದಿ ಸಮಿತಿ ಕಾರ್ಯದರ್ಶಿ ಶಾಮೀದಸಾಬ ಲೈನದಾರ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಕಲಂದರ್, ನಿಸಾರಆಹ್ಮದ, ಫಾರುಕಖಾನ್ ಕುರಾನ್ ಪಠಿಸಿದರು.</p>.<p>ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬಸಾಬ ಗುರಿಕಾರ, ಎಪಿಎಂಸಿ ಮಾಜಿ ಸದಸ್ಯ ಇಮಾಮಸಾಬ ಎಲಿಗಾರ, ಸಮಿತಿಯ ಪದಾಧಿಕಾರಿಗಳಾದ ಯಮನೂರಸಾಬ ಬಾಗಲಿ, ಮಹ್ಮದಸಾಬ ಸೂಳೇಕಲ್, ಗುಡುಸಾಬ ಗುರಿಕಾರ, ಇಮಾಮ ಹುಸೇನ ಹುಚ್ಚುಬುರಕಿ, ನಾನಸಾಬ, ಮಹ್ಮದಸಾಬ ಅಗರಬತ್ತಿ, ಹುಸೇನಸಾಬ ಬುಡಕುಂಟಿ ಇದ್ದರು.</p>.<p>ಮೆಕ್ಕಾ ಮದೀನ್, ಬರೇಲಿ ಷರೀಫ್ ಚಿತ್ರಗಳಿಗೆ ಪೂಜೆ ಸಲ್ಲಿಸಿ ಹೂವುಗಳಿಂದ ಅಲಂಕಾರಗೊಳಿಸಲಾಗಿತ್ತು.</p>.<p>ಸಾಮೂಹಿಕ ಪ್ರಾರ್ಥನೆ ಮುಗಿದ ನಂತರ ಸಿಹಿ ವಿತರಣೆ ಹಾಗೂ ಮಸೀದಿ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಯಿತು.<br />ಪಟ್ಟಣದ ಮಸೀದಿಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>ಮುಹಮ್ಮದ್ ಪೈಗಂಬರ್ ಅವರು ಬೋಧಿಸಿದ ಚಿಂತನೆ, ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತ ವಾಗಿವೆ. ಯುವ ಸಮುದಾಯ ಇಂಥ ಉದಾತ್ತ ಚಿಂತನೆ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಮೌಲಾನ್ ಮಹ್ಮದ ಸಜ್ಜಾದ ರಜಾ ನೂರಿ ತಿಳಿಸಿದರು.</p>.<p>ಇಲ್ಲಿನ ಜಾಮೀಯಾ ಮಸೀದಿಯಲ್ಲಿ ಮಂಗಳವಾರ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣವಿಲ್ಲದೆ ಯಾವ ಸಮಾಜವೂ ಕೂಡ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎಂಬುದನ್ನು ಮುಸ್ಲಿಂರು ಮೊದಲು ಅರಿತು ಕೊಳ್ಳಬೇಕು. ಅಂದಾಗ ಮಾತ್ರ ಸುಧಾರಣೆಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.</p>.<p>ಸರ್ಕಾರ ಎಲ್ಲಾ ವರ್ಗದ ಜನರಿಗೆ ವಿವಿಧ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಇಂಥ ಸೌಕರ್ಯಗಳನ್ನು ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕಗಿ ಸಬಲರಾಗಬೇಕು ಹೇಳಿದರು.</p>.<p>ಪ್ರಮುಖ ಚಂದುಸಾಬ ಸೂಳೇಕಲ್ ಅವರು ಕುರಾನ್ ಪಠಣ ಹಾಗೂ ಈದ್ಮಿಲಾದ ಹಬ್ಬದ ಆಚರಣೆಯ ಮಹತ್ವ ಕುರಿತು ತಿಳಿಸಿದರು. ಮಸೀದಿ ಸಮಿತಿ ಕಾರ್ಯದರ್ಶಿ ಶಾಮೀದಸಾಬ ಲೈನದಾರ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಕಲಂದರ್, ನಿಸಾರಆಹ್ಮದ, ಫಾರುಕಖಾನ್ ಕುರಾನ್ ಪಠಿಸಿದರು.</p>.<p>ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬಸಾಬ ಗುರಿಕಾರ, ಎಪಿಎಂಸಿ ಮಾಜಿ ಸದಸ್ಯ ಇಮಾಮಸಾಬ ಎಲಿಗಾರ, ಸಮಿತಿಯ ಪದಾಧಿಕಾರಿಗಳಾದ ಯಮನೂರಸಾಬ ಬಾಗಲಿ, ಮಹ್ಮದಸಾಬ ಸೂಳೇಕಲ್, ಗುಡುಸಾಬ ಗುರಿಕಾರ, ಇಮಾಮ ಹುಸೇನ ಹುಚ್ಚುಬುರಕಿ, ನಾನಸಾಬ, ಮಹ್ಮದಸಾಬ ಅಗರಬತ್ತಿ, ಹುಸೇನಸಾಬ ಬುಡಕುಂಟಿ ಇದ್ದರು.</p>.<p>ಮೆಕ್ಕಾ ಮದೀನ್, ಬರೇಲಿ ಷರೀಫ್ ಚಿತ್ರಗಳಿಗೆ ಪೂಜೆ ಸಲ್ಲಿಸಿ ಹೂವುಗಳಿಂದ ಅಲಂಕಾರಗೊಳಿಸಲಾಗಿತ್ತು.</p>.<p>ಸಾಮೂಹಿಕ ಪ್ರಾರ್ಥನೆ ಮುಗಿದ ನಂತರ ಸಿಹಿ ವಿತರಣೆ ಹಾಗೂ ಮಸೀದಿ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಯಿತು.<br />ಪಟ್ಟಣದ ಮಸೀದಿಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>