ಗ್ರಾಮದಲ್ಲಿ ನಾಯಿ ಕಡಿತದಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು, ವೃದ್ಧರು, ಮಹಿಳೆ ಸೇರಿದಂತೆ ಯುವಕರಿಗೆ ನಾಯಿ ಕಡಿದಿದ್ದು, ಗಾಯಾಳುಗಳಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ.
ಗಾಯಾಳುಗಳಿಗೆ ಅಳವಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ತದನಂತರ 7 ಜನರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮಕ್ಕಳನ್ನು ಹೊರಗಡೆ ಕಳುಹಿಸಬೇಡಿ ಹಾಗೂ ಹೊರಗೆ ಬಂದವರು ಎಚ್ಚರದಿಂದ ಇರಬೇಕು ಎಂದು ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ಮನವಿ ಮಾಡಿದೆ.