ಕುಕನೂರು: ಐದು ವರ್ಷದ ಅವಧಿಯಲ್ಲಿ ಮಾಡಿದ ಕೆರೆಗಳ ಜೀರ್ಣೋದ್ಧಾರ, ಗ್ರಾಮೀಣ ಪ್ರದೇಶಗಳ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ನಾನೇ ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ ದಾರಿತಪ್ಪಿಸುತ್ತಿರುವ ರಾಯರಡ್ಡಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲ್ಲೂಕಿನ ಹೊನ್ನುಣಿಸಿ, ಚಿಕ್ಕ ಬೀಡೇನಾಳ, ಕದ್ರಳ್ಳಿ, ಹಿರೇಬೀಡನಾಳ, ಮುತ್ತಾಳ, ಅರಿಕೇರಿ, ಚಂಡೂರು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.