ರೈತ ರವೀಂದ್ರ ಸಂಗರಡ್ಡಿ ಮಾತನಾಡಿ,‘ಈ ವರ್ಷ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಕಡಲೆ, ಜೋಳ ಸೇರಿ ಹಲವು ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದು, ಉತ್ತಮ ಫಸಲಿನ ನೀರಿಕ್ಷೆಯಲ್ಲಿದ್ದೇವೆ. ಎಳ್ಳ ಅಮಾವಾಸ್ಯೆ ಪ್ರಯುಕ್ತ ಬಂಧು ಬಳಗ, ಮಿತ್ರರೊಂದಿಗೆ ಜಮೀನುಗಳಿಗೆ ತೆರಳಿ ಪೂಜೆ ಸಲ್ಲಿಸಿ ಚರಗ ಚೆಲ್ಲಿ ಊಟ ಮಾಡುತ್ತೇವೆ’ ಎಂದರು.