ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರು ಮಾತನಾಡಿ,‘ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಆಗಿನ ನಾಯಕರು ಹೇಳಿದರು. ಆದರೆ ನಂತರ ಕಾಂಗ್ರೆಸ್ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾಯಿತು. ಈ ದೇಶಕ್ಕೆ ನೆಹರೂ ಮನೆತನದವರೇ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂಬಂತೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಮಹೇಶ ಮಾತನಾಡಿದರು. ತುರ್ತುಪರಿಸ್ಥಿತಿ ವಿರೋಧಿಸಿ ಮುಖಂಡ ಅಮರೇಗೌಡ ಜಾಲಿಹಾಳ ತಮ್ಮ ಸ್ವರಚಿತ ಕವನ ವಾಚಿಸಿದರು. ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಹಾಗೂ ಇತರರು ಇದ್ದರು. ಚಂದ್ರಕಾಂತ ವಡಗೇರಿ ನಿರೂಪಿಸಿದರು. ತುರ್ತುಪರಿಸ್ಥಿತಿಯಲ್ಲಿ ಸೆರೆವಾಸ ಅನುಭವಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಬಿ.ಕಿಶನರಾವ್ ಅವರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ನಂತರ ಪ್ರಮುಖ ಬೀದಿಗಳಲ್ಲಿ ಜನಜಾಗೃತಿ ಜಾಥಾ ನಡೆಸಲಾಯಿತು. ಪಕ್ಷದ ತಾಲ್ಲೂಕು ಮುಖಂಡರು, ಮಹಿಳೆಯರು ಸೇರಿದಂತೆ ಅನೇಕ ಜನ ಪಾಲ್ಗೊಂಡಿದ್ದರು.