<p><strong>ಕೊಪ್ಪಳ:</strong> ನಗರದಲ್ಲಿ ಅಂದಾಜು ₹9.84 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿ ‘ನಗರವನ್ನು ಸುಂದರ, ಸುಸಜ್ಜಿತವನ್ನಾಗಿ ಮಾಡುವ ದೂರದೃಷ್ಟಿ ಹೊಂದಿದ್ದು, ಹಂತ ಹಂತವಾಗಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಅಭಿವೃದ್ಧಿಗೆ ಆದ್ಯತೆ ನೀಡಲು ಕೊಳೆಗೇರಿ ಮಂಡಳಿಯಿಂದಲೂ ಅನುದಾನ ತರುವ ಕೆಲಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.</p>.<p>‘ಕೊಪ್ಪಳದಲ್ಲಿ ಎರಡ್ಮೂರು ದಿನಗಳಿಗೊಮ್ಮೆ ಕುಡಿಯುವ ನೀರು ಬರುತ್ತಿದ್ದು 24×7 ಕುಡಿಯುವ ನೀರು ಒದಗಿಸುವ ಕಾಮಗಾರಿ ವೇಗವಾಗಿ ನಡೆಯುತ್ತದೆ. ಮುಂಬರುವ ದಿನಗಳಲ್ಲಿ ನಿತ್ಯ ನೀರು ಒದಗಿಸಲು ಪ್ರಯತ್ನ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರತಿ ವಾರ್ಡ್ಗೆ ₹25ರಿಂದ ₹30 ಲಕ್ಷ ಅನುದಾನ ನೀಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಸಂಸದ ಕೆ. ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಉಪಾಧ್ಯಕ್ಷೆ ಅಶ್ವಿನಿ ಗದುಗಿನಮಠ, ಸದಸ್ಯರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ನಗರದಲ್ಲಿ ಅಂದಾಜು ₹9.84 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿ ‘ನಗರವನ್ನು ಸುಂದರ, ಸುಸಜ್ಜಿತವನ್ನಾಗಿ ಮಾಡುವ ದೂರದೃಷ್ಟಿ ಹೊಂದಿದ್ದು, ಹಂತ ಹಂತವಾಗಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಅಭಿವೃದ್ಧಿಗೆ ಆದ್ಯತೆ ನೀಡಲು ಕೊಳೆಗೇರಿ ಮಂಡಳಿಯಿಂದಲೂ ಅನುದಾನ ತರುವ ಕೆಲಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.</p>.<p>‘ಕೊಪ್ಪಳದಲ್ಲಿ ಎರಡ್ಮೂರು ದಿನಗಳಿಗೊಮ್ಮೆ ಕುಡಿಯುವ ನೀರು ಬರುತ್ತಿದ್ದು 24×7 ಕುಡಿಯುವ ನೀರು ಒದಗಿಸುವ ಕಾಮಗಾರಿ ವೇಗವಾಗಿ ನಡೆಯುತ್ತದೆ. ಮುಂಬರುವ ದಿನಗಳಲ್ಲಿ ನಿತ್ಯ ನೀರು ಒದಗಿಸಲು ಪ್ರಯತ್ನ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರತಿ ವಾರ್ಡ್ಗೆ ₹25ರಿಂದ ₹30 ಲಕ್ಷ ಅನುದಾನ ನೀಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಸಂಸದ ಕೆ. ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಉಪಾಧ್ಯಕ್ಷೆ ಅಶ್ವಿನಿ ಗದುಗಿನಮಠ, ಸದಸ್ಯರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>