ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಂಬಂಧಿಸಿದ ಹುದ್ದೆಗಳು ಇಲ್ಲದ ಕಾರಣ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ಬಹಳ ವರ್ಷಗಳಿಂದ ಆರ್ಥಿಕ ಸಮಸ್ಯೆಯಾಗಿ ಹೇಗೋ ಹಣ ಹೊಂದಿಸಿ ಸಂಬಳ ನೀಡುತ್ತ ಬರಲಾಗಿದೆ. ಕೆಲ ಸಮಸ್ಯೆಗಳಿಂದಾಗಿ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಎರಡು ದಿನಗಳ ಹಿಂದೆಯಷ್ಟೇ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ’ ಎಂದರು.