ಸಂಸ್ಥೆ ನೀಡಿದ ತನಿಖಾ ವರದಿಯ ಆಧಾರದ ಮೇಲೆ ಎಂಜಿನಿಯರ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದರೆ, ಎಂಜಿನಿಯರ್ ನೋಟಿಸ್ಗೆ ಉತ್ತರ ನೀಡಿಲ್ಲ. ಕರ್ತವ್ಯ ಲೋಪ ಹಾಗೂ ಅವರಿಂದ ಸರ್ಕಾರಕ್ಕೆ ಆಗಿರುವ ಆರ್ಥಿಕ ನಷ್ಟದ ಕಾರಣಕ್ಕೆ ಎಂಜಿನಿಯರ್ ವಿರುದ್ಧ ಇಲಾಖೆ ಮಟ್ಟದಲ್ಲಿ ವಿಚಾರಣೆ ಜರುಗಿಸಬೇಕಿರುವುದು ಅವಶ್ಯವಾಗಿರುವುದರಿಂದ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಅಮಾನತು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.