<p>ಅಳವಂಡಿ: ಸರ್ಕಾರಿ ಶಾಲೆಗಳು ಪ್ರಗತಿ ಹೊಂದಲು ಗ್ರಾಮಸ್ಥರ ಸಹಕಾರ ಅತ್ಯವಶ್ಯಕವಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಲೆಯ ಮುಖ್ಯಶಿಕ್ಷಕ ಶಂಭುಲಿಂಗನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಮೈನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಕೊಪ್ಪಳ ವತಿಯಿಂದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ಡೊಳ್ಳು ಕುಣಿತ, ಕೋಲಾಟ ನೃತ್ಯ, ಪೂರ್ಣ ಕುಂಭಕಶಸದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಿಕ್ಷಣದ ಮಹತ್ವ ಸಾರುವ ಘೋಷಣೆ ಕೂಗಲಾಯಿತು. ಎತ್ತಿನ ಬಂಡಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿದ್ದು ಗಮನ ಸೆಳೆಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಹೇಂದ್ರಗೌಡ, ಉಪಾಧ್ಯಕ್ಷ ನಾಗಭೂಷಣ ಬೇಳೂರು, ಕಲಿಕಾ ಟ್ರಸ್ಟ್ ಸಂಯೋಜಕ ಕಲ್ಲಪ್ಪ, ಸುರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳವಂಡಿ: ಸರ್ಕಾರಿ ಶಾಲೆಗಳು ಪ್ರಗತಿ ಹೊಂದಲು ಗ್ರಾಮಸ್ಥರ ಸಹಕಾರ ಅತ್ಯವಶ್ಯಕವಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಲೆಯ ಮುಖ್ಯಶಿಕ್ಷಕ ಶಂಭುಲಿಂಗನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಮೈನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಕೊಪ್ಪಳ ವತಿಯಿಂದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ಡೊಳ್ಳು ಕುಣಿತ, ಕೋಲಾಟ ನೃತ್ಯ, ಪೂರ್ಣ ಕುಂಭಕಶಸದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಿಕ್ಷಣದ ಮಹತ್ವ ಸಾರುವ ಘೋಷಣೆ ಕೂಗಲಾಯಿತು. ಎತ್ತಿನ ಬಂಡಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿದ್ದು ಗಮನ ಸೆಳೆಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಹೇಂದ್ರಗೌಡ, ಉಪಾಧ್ಯಕ್ಷ ನಾಗಭೂಷಣ ಬೇಳೂರು, ಕಲಿಕಾ ಟ್ರಸ್ಟ್ ಸಂಯೋಜಕ ಕಲ್ಲಪ್ಪ, ಸುರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>