<p><strong>ಕಾರಟಗಿ:</strong> ಉನ್ನತೀಕರಿಸಿದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೇಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2025- 26ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನವನ್ನು ಬುಧವಾರ ಪ್ರತ್ಯೇಕವಾಗಿ ಮಾಡಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯಗುರುಗಳು, ಸಹ ಶಿಕ್ಷಕರು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಜಾಥಾ ನಡೆಸಿ, ಮನೆಗಳಿಗೆ ಭೇಟಿ ನೀಡಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿಸುವಂತೆ ಎಂದು ಅರಿವು ಮೂಡಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಕನಿಷ್ಠ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವ ಜೊತೆಗೆ ಸರ್ಕಾರದ ಅನೇಕ ಸೌಲಭ್ಯಗಳು ಮಕ್ಕಳಿಗೆ ದೊರೆಯುತ್ತವೆ. ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದರು.</p>.<p>ಎಸ್ಡಿಎಂಸಿ ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಮರಿಯಪ್ಪ, ಮುಖ್ಯೋಪಾಧ್ಯಾಯರಾದ ಬಸಯ್ಯ ಮಠ, ಶ್ಯಾಂಸುಂದರ್ ಎಂಜಿನಿ, ಶಿಕ್ಷಕರಾದ ರಾಮಪ್ಪ, ಪ್ರಮೀಳಾದೇವಿ, ಅಮರೇಶ ಮೈಲಾಪುರ, ಸುವರ್ಣಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಉನ್ನತೀಕರಿಸಿದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೇಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2025- 26ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನವನ್ನು ಬುಧವಾರ ಪ್ರತ್ಯೇಕವಾಗಿ ಮಾಡಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯಗುರುಗಳು, ಸಹ ಶಿಕ್ಷಕರು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಜಾಥಾ ನಡೆಸಿ, ಮನೆಗಳಿಗೆ ಭೇಟಿ ನೀಡಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿಸುವಂತೆ ಎಂದು ಅರಿವು ಮೂಡಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಕನಿಷ್ಠ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವ ಜೊತೆಗೆ ಸರ್ಕಾರದ ಅನೇಕ ಸೌಲಭ್ಯಗಳು ಮಕ್ಕಳಿಗೆ ದೊರೆಯುತ್ತವೆ. ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದರು.</p>.<p>ಎಸ್ಡಿಎಂಸಿ ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಮರಿಯಪ್ಪ, ಮುಖ್ಯೋಪಾಧ್ಯಾಯರಾದ ಬಸಯ್ಯ ಮಠ, ಶ್ಯಾಂಸುಂದರ್ ಎಂಜಿನಿ, ಶಿಕ್ಷಕರಾದ ರಾಮಪ್ಪ, ಪ್ರಮೀಳಾದೇವಿ, ಅಮರೇಶ ಮೈಲಾಪುರ, ಸುವರ್ಣಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>