<p><strong>ಯಲಬುರ್ಗಾ</strong>: ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಉದ್ಯಮಶೀಲರಾಗಲು ಬೇಕಾದ ಜ್ಞಾನದ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡುವ ಸಿಡಾಕ್ ಸಂಸ್ಥೆಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕ ಜಿ.ಯು. ಹುಡೇದ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಉದ್ಯಮಶೀಲತಾ ತಿಳಿವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈ ಸಂಸ್ಥೆ ನೀಡಿದ ತರಬೇತಿ ಯೊಂದಿದವರು ಸಾಕಷ್ಟು ಸಂಖ್ಯೆಯಲ್ಲಿ ಸ್ವಯಂ ಉದ್ಯೋಗ ಕಂಡುಕೊಂಡಿದ್ದಾರೆ. ಅಲ್ಲದೇ ಸಾಕಷ್ಟು ಸಂಖ್ಯೆಯ ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಇಂತಹ ಸಾಧಕರ ಸಾಲಿನಲ್ಲಿ ಯುವ ಪದವೀಧರರು ಸೇರುವಲ್ಲಿ ಆಸಕ್ತಿ ತೋರಬೇಕಾಗಿದೆ‘ ಎಂದರು.</p>.<p>‘ಉದ್ಯಮಿಗಳಾಗಬೇಕಾದರೆ ಪದವಿ ಬೇಕಿಲ್ಲ. ಸರಿಯಾದ ಜ್ಞಾನ ಮತ್ತು ತರಬೇತಿ, ಇಚ್ಛಾಶಕ್ತಿ ಹಾಗೂ ಸಮಯ ಪ್ರಜ್ಞೆ ಇವುಗಳು ಅವಶ್ಯವಾಗಿ ಬೇಕಾಗುತ್ತದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯದೇ ಸ್ವಯಂ ಉದ್ಯೋಗದತ್ತ ಯುವಕರು ಮನಸ್ಸು ಮಾಡಬೇಕು‘ ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ‘ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸ್ವಾವಲಂಬಿ ಜೀವನ ನಡೆಸಲು ಬೇಕಾದ ಕೌಶಲಗಳ ಬಗ್ಗೆ ಉತ್ತಮ ಮಾರ್ಗದರ್ಶನ ಸಿಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು‘ ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಎಚ್.ಎನ್.ಗುಡಿಹಿಂದಿನ, ಐಕ್ಯೂಎಸಿ ಸಂಚಾಲಕ ಎ.ಬಿ.ಕೆಂಚರಡ್ಡಿ ಮಾತನಾಡಿದರು.</p>.<p>ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಜಗದೀಶ ಯಲಿಗಾರ, ಆರ್ಥಿಕ ಸಾಕ್ಷರತೆಯ ಆಪ್ತಸಮಾಲೋಚಕ ರೇವಣರಾಧ್ಯ, ಅಕ್ಷತಾ ಗೋಟೂರ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರಾದ ವೈ.ಬಿ.ಅಂಗಡಿ, ವಿನೋದ ಇದ್ದರು. ವಿರೇಶ ಗಜೇಂದ್ರಗಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಉದ್ಯಮಶೀಲರಾಗಲು ಬೇಕಾದ ಜ್ಞಾನದ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡುವ ಸಿಡಾಕ್ ಸಂಸ್ಥೆಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕ ಜಿ.ಯು. ಹುಡೇದ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಉದ್ಯಮಶೀಲತಾ ತಿಳಿವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈ ಸಂಸ್ಥೆ ನೀಡಿದ ತರಬೇತಿ ಯೊಂದಿದವರು ಸಾಕಷ್ಟು ಸಂಖ್ಯೆಯಲ್ಲಿ ಸ್ವಯಂ ಉದ್ಯೋಗ ಕಂಡುಕೊಂಡಿದ್ದಾರೆ. ಅಲ್ಲದೇ ಸಾಕಷ್ಟು ಸಂಖ್ಯೆಯ ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಇಂತಹ ಸಾಧಕರ ಸಾಲಿನಲ್ಲಿ ಯುವ ಪದವೀಧರರು ಸೇರುವಲ್ಲಿ ಆಸಕ್ತಿ ತೋರಬೇಕಾಗಿದೆ‘ ಎಂದರು.</p>.<p>‘ಉದ್ಯಮಿಗಳಾಗಬೇಕಾದರೆ ಪದವಿ ಬೇಕಿಲ್ಲ. ಸರಿಯಾದ ಜ್ಞಾನ ಮತ್ತು ತರಬೇತಿ, ಇಚ್ಛಾಶಕ್ತಿ ಹಾಗೂ ಸಮಯ ಪ್ರಜ್ಞೆ ಇವುಗಳು ಅವಶ್ಯವಾಗಿ ಬೇಕಾಗುತ್ತದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯದೇ ಸ್ವಯಂ ಉದ್ಯೋಗದತ್ತ ಯುವಕರು ಮನಸ್ಸು ಮಾಡಬೇಕು‘ ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ‘ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸ್ವಾವಲಂಬಿ ಜೀವನ ನಡೆಸಲು ಬೇಕಾದ ಕೌಶಲಗಳ ಬಗ್ಗೆ ಉತ್ತಮ ಮಾರ್ಗದರ್ಶನ ಸಿಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು‘ ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಎಚ್.ಎನ್.ಗುಡಿಹಿಂದಿನ, ಐಕ್ಯೂಎಸಿ ಸಂಚಾಲಕ ಎ.ಬಿ.ಕೆಂಚರಡ್ಡಿ ಮಾತನಾಡಿದರು.</p>.<p>ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಜಗದೀಶ ಯಲಿಗಾರ, ಆರ್ಥಿಕ ಸಾಕ್ಷರತೆಯ ಆಪ್ತಸಮಾಲೋಚಕ ರೇವಣರಾಧ್ಯ, ಅಕ್ಷತಾ ಗೋಟೂರ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರಾದ ವೈ.ಬಿ.ಅಂಗಡಿ, ವಿನೋದ ಇದ್ದರು. ವಿರೇಶ ಗಜೇಂದ್ರಗಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>