<p><strong>ಮಸಬಹಂಚಿನಾಳ (ಕುಕನೂರು): </strong>‘ಮನುಷ್ಯ ಸಂಕುಲದ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದೆ. ಅರಣ್ಯ ಮತ್ತು ಕೃಷಿ ಕರಳು ಬಳ್ಳಿಯ ಸಂಬಂಧ ಹೊಂದಿವೆ. ಸಸಿ ನೆಟ್ಟರೆ ಸಾಲದು, ಅದನ್ನು ಬೆಳೆಸುವ ಮನಸ್ಸುಬೇಕು’ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.</p>.<p>ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಗೌರಮ್ಮ ಬಸಪ್ಪ ಆಚಾರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನಾವೆಲ್ಲರೂ ಪ್ರಕೃತಿಯ ಒಂದು ಭಾಗವಾಗಿದ್ದೇವೆ. ಕಟ್ಟಡ, ರಸ್ತೆ ನಿರ್ಮಾಣದ ನೆಪದಲ್ಲಿ ಮರಗಳ ಮಾರಣಹೋಮ ನಡೆಸುತ್ತಿರುವುದು ಸರಿಯಲ್ಲ. ಮರಗಳನ್ನು ಬೆಳೆಸುವುದರಿಂದ ಮಳೆ, ಶುದ್ಧ ಗಾಳಿ, ನೆರಳಿನ ಆಸರೆ ದೊರೆಯುತ್ತದೆ. ಅಲ್ಲದೆ ಬಿಸಿಲಿನ ಪ್ರಖರತೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ, ಸದಸ್ಯ ಹನುಮಂತ ಬನ್ನಿಕೊಪ್ಪ, ಲಕ್ಷ್ಮಣ ಪೂಜಾರ್, ಬಸವರಾಜ ಪೂಜಾರ್, ಸುರೇಶ, ವಿಶ್ವನಾಥ ಹಾಗೂ ಸಿಬ್ಬಂದಿ ಸಿದ್ಧಲಿಂಗಯ್ಯ ಸಾಲಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸಬಹಂಚಿನಾಳ (ಕುಕನೂರು): </strong>‘ಮನುಷ್ಯ ಸಂಕುಲದ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದೆ. ಅರಣ್ಯ ಮತ್ತು ಕೃಷಿ ಕರಳು ಬಳ್ಳಿಯ ಸಂಬಂಧ ಹೊಂದಿವೆ. ಸಸಿ ನೆಟ್ಟರೆ ಸಾಲದು, ಅದನ್ನು ಬೆಳೆಸುವ ಮನಸ್ಸುಬೇಕು’ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.</p>.<p>ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಗೌರಮ್ಮ ಬಸಪ್ಪ ಆಚಾರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನಾವೆಲ್ಲರೂ ಪ್ರಕೃತಿಯ ಒಂದು ಭಾಗವಾಗಿದ್ದೇವೆ. ಕಟ್ಟಡ, ರಸ್ತೆ ನಿರ್ಮಾಣದ ನೆಪದಲ್ಲಿ ಮರಗಳ ಮಾರಣಹೋಮ ನಡೆಸುತ್ತಿರುವುದು ಸರಿಯಲ್ಲ. ಮರಗಳನ್ನು ಬೆಳೆಸುವುದರಿಂದ ಮಳೆ, ಶುದ್ಧ ಗಾಳಿ, ನೆರಳಿನ ಆಸರೆ ದೊರೆಯುತ್ತದೆ. ಅಲ್ಲದೆ ಬಿಸಿಲಿನ ಪ್ರಖರತೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ, ಸದಸ್ಯ ಹನುಮಂತ ಬನ್ನಿಕೊಪ್ಪ, ಲಕ್ಷ್ಮಣ ಪೂಜಾರ್, ಬಸವರಾಜ ಪೂಜಾರ್, ಸುರೇಶ, ವಿಶ್ವನಾಥ ಹಾಗೂ ಸಿಬ್ಬಂದಿ ಸಿದ್ಧಲಿಂಗಯ್ಯ ಸಾಲಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>