ರಾಜ್ಯದಲ್ಲಿ 5ದಿನ ಗಣೇಶ ಹಬ್ಬ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಜಿಲ್ಲಾಧಿಕಾರಿ ಸಭೆ ನಡೆಸಿ, ಸರ್ಕಾರದ ಮಾರ್ಗಸೂಚಿಗಳ ಅನ್ವಯ ಹಬ್ಬ ಆಚರಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಕೂಡಿಸುವವರು ನಗರಸಭೆ, ಜೆಸ್ಕಾಂ, ಪೊಲೀಸ್ ಇಲಾಖೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಗರ ಪೋಲಿಸ್ ಠಾಣೆಯಲ್ಲಿ ಪರವಾನಗಿ ನೀಡುವ ಕೌಂಟರ್ ತೆರೆಯಲಾಗಿದೆ ಎಂದರು.