<p><strong>ಕೊಪ್ಪಳ:</strong> ದೇಶದ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಸಿ.ಪಿ.ಎಸ್ ಶಾಲೆಯ ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.</p>.<p>ನಗರದ ಸಿ.ಪಿ.ಎಸ್ ಶಾಲೆಯಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>1949ರ ನ. 26ರಂದು ಸಂವಿಧಾನ ಅಂಗೀರಕಾರವಾದ ದಿನದ ನೆನಪಿಗಾಗಿ ಸಂವಿಧಾನ ದಿನ ಆಚರಿಸಲಾಗುತ್ತದೆ. ಸಂವಿಧಾನದ ರಚನೆಗೆ 2 ವರ್ಷ 11 ತಿಂಗಳು 17 ದಿನ ತಜ್ಞರು ಶ್ರಮಿವಹಿಸಿದ್ದಾರೆ ಎಂದರು.</p>.<p>ಡಾ.ಬಾಬು ರಾಜೇಂದ್ರ ಪ್ರಸಾದ ಸಂವಿಧಾನ ರಚನಾ ಸಭೆಯ ಸಮಿಯ ಅಧ್ಯಕ್ಷರಾಗಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತದ ಸಂವಿಧಾನ ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶ ನೀಡಿದೆ ಎಂದರು.</p>.<p>ಶಿಕ್ಷಕ ಗುರುರಾಜ ಕಟ್ಟಿ ಮಾತನಾಡಿ, ಭಾರತ ಸಂವಿಧಾನ ದಿನದ ಅಂಗವಾಗಿ ಮಕ್ಕಳಿಗೆ ಅದರ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು. ಜತೆಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಬೇಕು. ಆಗ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.</p>.<p>ಶಿಕ್ಷಕರಾದ ನಾಗಪ್ಪ ನರಿ, ಶಂಕ್ರಮ್ಮ ಬಂಗಾರಶೆಟ್ಟರ್, ಗಂಗಮ್ಮ, ಶೀಲಾ ಬಂಡಿ, ಜಯಶ್ರೀ ದೇಸಾಯಿ, ಭಾರತಿ ಕೊಡ್ಲಿ, ಗೌಸೀಯಾಬೇಗಂ, ರತ್ನಾ, ಮೋಹಿನಪಾಷಾಬೀ ಅವರು<br />ಇದ್ದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿ ಭಾಗ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಬಿ.ಇಡಿ ಪ್ರಶಿಕ್ಷಣಾರ್ಥಿ ಅಕ್ಕಮಹಾದೇವಿ ಸ್ವಾಗತಿಸಿ, ಸುರೈಯಾಬೇಗಂ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ದೇಶದ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಸಿ.ಪಿ.ಎಸ್ ಶಾಲೆಯ ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.</p>.<p>ನಗರದ ಸಿ.ಪಿ.ಎಸ್ ಶಾಲೆಯಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>1949ರ ನ. 26ರಂದು ಸಂವಿಧಾನ ಅಂಗೀರಕಾರವಾದ ದಿನದ ನೆನಪಿಗಾಗಿ ಸಂವಿಧಾನ ದಿನ ಆಚರಿಸಲಾಗುತ್ತದೆ. ಸಂವಿಧಾನದ ರಚನೆಗೆ 2 ವರ್ಷ 11 ತಿಂಗಳು 17 ದಿನ ತಜ್ಞರು ಶ್ರಮಿವಹಿಸಿದ್ದಾರೆ ಎಂದರು.</p>.<p>ಡಾ.ಬಾಬು ರಾಜೇಂದ್ರ ಪ್ರಸಾದ ಸಂವಿಧಾನ ರಚನಾ ಸಭೆಯ ಸಮಿಯ ಅಧ್ಯಕ್ಷರಾಗಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತದ ಸಂವಿಧಾನ ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶ ನೀಡಿದೆ ಎಂದರು.</p>.<p>ಶಿಕ್ಷಕ ಗುರುರಾಜ ಕಟ್ಟಿ ಮಾತನಾಡಿ, ಭಾರತ ಸಂವಿಧಾನ ದಿನದ ಅಂಗವಾಗಿ ಮಕ್ಕಳಿಗೆ ಅದರ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು. ಜತೆಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಬೇಕು. ಆಗ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.</p>.<p>ಶಿಕ್ಷಕರಾದ ನಾಗಪ್ಪ ನರಿ, ಶಂಕ್ರಮ್ಮ ಬಂಗಾರಶೆಟ್ಟರ್, ಗಂಗಮ್ಮ, ಶೀಲಾ ಬಂಡಿ, ಜಯಶ್ರೀ ದೇಸಾಯಿ, ಭಾರತಿ ಕೊಡ್ಲಿ, ಗೌಸೀಯಾಬೇಗಂ, ರತ್ನಾ, ಮೋಹಿನಪಾಷಾಬೀ ಅವರು<br />ಇದ್ದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿ ಭಾಗ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಬಿ.ಇಡಿ ಪ್ರಶಿಕ್ಷಣಾರ್ಥಿ ಅಕ್ಕಮಹಾದೇವಿ ಸ್ವಾಗತಿಸಿ, ಸುರೈಯಾಬೇಗಂ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>