<p><strong>ಕನಕಗಿರಿ:</strong> ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷೆ ಶಂಶಾದಬೇಗಂ ಮಾತನಾಡಿ,‘ಲೋಕಸಭಾ ಚುನಾವಣೆಯ ಕರ್ತವ್ಯದ ಸಮಯದಲ್ಲಿ ಶಿಕ್ಷಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ<br> 55 ವರ್ಷ ಹೊಂದಿದ ಹಾಗೂ ಚಿಕ್ಕ ಮಕ್ಕಳನ್ನು ಹೊಂದಿರುವ ಮತ್ತು ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕರು ಹಾಗೂ ನೌಕರರಿಗೆ ಚುನಾವಣೆಯಲ್ಲಿ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿಕೊಂಡರು.</p>.<p>ಗರ್ಭಿಣಿಯರು, ಅಂಗವಿಕಲರು ಹಾಗೂ ಮಹಿಳಾ ಶಿಕ್ಷಕರನ್ನು ಕೆಲಸದಿಂದ ಕೈಬಿಡಬೇಕು ಎಂದು ಕೋರಿದರು. ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಬಸ್, ವಸತಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ವಿಶ್ವನಾಥ ಮುರುಡಿ ಸಂಘದ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.</p>.<p>ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶೇಖರಯ್ಯ ಕಲ್ಮಠ, ಉಪಾಧ್ಯಕ್ಷೆ ಜ್ಯೋತಿ ಭತ್ತದ, ಸಂಘಟನಾ ಕಾರ್ಯದರ್ಶಿ ಜಗದೀಶ ಟಿ.ಎಸ್, ನಿರ್ದೇಶಕ ತಿಪ್ಪೇಶ, ಮಲ್ಲಿಕಾರ್ಜುನ ಕುಷ್ಟಗಿ, ವಿಮಲಾಬಾಯಿ ಜೋಷಿ, ಗೀತಾ ಹಂಚಾಟೆ, ರೇಣುಕಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷೆ ಶಂಶಾದಬೇಗಂ ಮಾತನಾಡಿ,‘ಲೋಕಸಭಾ ಚುನಾವಣೆಯ ಕರ್ತವ್ಯದ ಸಮಯದಲ್ಲಿ ಶಿಕ್ಷಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ<br> 55 ವರ್ಷ ಹೊಂದಿದ ಹಾಗೂ ಚಿಕ್ಕ ಮಕ್ಕಳನ್ನು ಹೊಂದಿರುವ ಮತ್ತು ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕರು ಹಾಗೂ ನೌಕರರಿಗೆ ಚುನಾವಣೆಯಲ್ಲಿ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿಕೊಂಡರು.</p>.<p>ಗರ್ಭಿಣಿಯರು, ಅಂಗವಿಕಲರು ಹಾಗೂ ಮಹಿಳಾ ಶಿಕ್ಷಕರನ್ನು ಕೆಲಸದಿಂದ ಕೈಬಿಡಬೇಕು ಎಂದು ಕೋರಿದರು. ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಬಸ್, ವಸತಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ವಿಶ್ವನಾಥ ಮುರುಡಿ ಸಂಘದ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.</p>.<p>ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶೇಖರಯ್ಯ ಕಲ್ಮಠ, ಉಪಾಧ್ಯಕ್ಷೆ ಜ್ಯೋತಿ ಭತ್ತದ, ಸಂಘಟನಾ ಕಾರ್ಯದರ್ಶಿ ಜಗದೀಶ ಟಿ.ಎಸ್, ನಿರ್ದೇಶಕ ತಿಪ್ಪೇಶ, ಮಲ್ಲಿಕಾರ್ಜುನ ಕುಷ್ಟಗಿ, ವಿಮಲಾಬಾಯಿ ಜೋಷಿ, ಗೀತಾ ಹಂಚಾಟೆ, ರೇಣುಕಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>