ಧಾರ್ಮಿಕದತ್ತಿ ಇಲಾಖೆಗೆ ದೇವಸ್ಥಾನ ಸೇರ್ಪಡೆಯಾದ ನಂತರ ಪ್ರಥಮಬಾರಿಗೆ ರಥವನ್ನು ಉತ್ತರಾಭಿಮುಖವಾಗಿ ಎಳೆಯಲಾಯಿತು. ಸಾವಿರಾರು ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಸಂಭ್ರಮಿಸಿದರು. ದೇವಸ್ಥಾನ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ ಜೆ.ಬಿ.ಮಜ್ಜಿಗಿ, ಉಪತಹಶೀಲ್ದಾರ ರೇಖಾದೀಕ್ಷಿತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮತ್ತು ಸುತ್ತಲಿನ ಅನೇಕರು ಪಾಲ್ಗೊಂಡಿದ್ದರು. ರಥೋತ್ಸವದ ನಂತರ ಮದ್ದುಸುಡುವ ಕಾರ್ಯಕ್ರಮ ನಡೆಯಿತು.