ಗ್ರಾಮದಲ್ಲಿ 3 ಎಕರೆ ಜಮೀನಿದ್ದು, ಮಾರ್ಲಾನಹಳ್ಳಿಯ ಪಿಕೆಜಿ ಬ್ಯಾಂಕ್ನಿಂದ ₹ 4 ಲಕ್ಷ ಹಾಗೂ ಖಾಸಗಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ನೊಂದಿದ್ದ ಶಿವರಡೆಪ್ಪ ಜ.27ರಂದು ವಿಷ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.