<p><strong>ಕೂಕನೂರು (ಕೊಪ್ಪಳ ಜಿಲ್ಲೆ)</strong>: ಭೀಕರ ಬರಗಾಲಕ್ಕೆ ನಲುಗಿದ ಜಿಲ್ಲೆಯ ಕೂಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮಹೇಶ ಕುದ್ರಿಕಟಿಗಿ ( 37) ಮೃತ ರೈತ. ಇವರಿಗೆ ಪತ್ನಿ, ಮೂವರು ಮಕ್ಕಳು, ಸಹೋದರ ಹಾಗೂ ತಾಯಿ ಇದ್ದಾರೆ. ಇವರು ಖಾಸಗಿ ಬ್ಯಾಂಕ್ ಹಾಗೂ ಕೈಗಡ ಸೇರಿ ವಿವಿಧೆಡೆ ಸಾಲ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಕಾಲಕ್ಕೆ ಮಳೆಯಾಗದಿರುವುದು ಹಾಗೂ ನೀರಾವರಿ ಆಶ್ರಿತ ಭೂಮಿಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಸೋಮವಾರ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿದ್ದಾದ ಅವರನ್ನು ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.</p><p>ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಕನೂರು (ಕೊಪ್ಪಳ ಜಿಲ್ಲೆ)</strong>: ಭೀಕರ ಬರಗಾಲಕ್ಕೆ ನಲುಗಿದ ಜಿಲ್ಲೆಯ ಕೂಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮಹೇಶ ಕುದ್ರಿಕಟಿಗಿ ( 37) ಮೃತ ರೈತ. ಇವರಿಗೆ ಪತ್ನಿ, ಮೂವರು ಮಕ್ಕಳು, ಸಹೋದರ ಹಾಗೂ ತಾಯಿ ಇದ್ದಾರೆ. ಇವರು ಖಾಸಗಿ ಬ್ಯಾಂಕ್ ಹಾಗೂ ಕೈಗಡ ಸೇರಿ ವಿವಿಧೆಡೆ ಸಾಲ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಕಾಲಕ್ಕೆ ಮಳೆಯಾಗದಿರುವುದು ಹಾಗೂ ನೀರಾವರಿ ಆಶ್ರಿತ ಭೂಮಿಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಸೋಮವಾರ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿದ್ದಾದ ಅವರನ್ನು ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.</p><p>ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>