<p><strong>ಕುಕನೂರು:</strong> ಮುಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣಕ್ಕೆ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಬಸವರಾಜ ಶಿವಪ್ಪ ಚಟ್ಟಿ ಎಂಬ ರೈತ ತನ್ನ ಎಂಟು ಎಕರೆ ಭೂಮಿಯಲ್ಲಿ ಉಳಿಮೆ ಮಾಡಿದ್ದ ಮೆಕ್ಕೆಜೋಳವನ್ನು ಬೇಸರದಿಂದಲೇ ಟ್ರ್ಯಾಕ್ಟರ್ನಿಂದ ನಾಶಪಡಿಸಿದ್ದಾರೆ. </p>.<p>ಕಳೆದ ವರ್ಷದ ಬರಗಾಲದಿಂದ ಕಂಗೆಟ್ಟಿದ್ದ ಅನ್ನದಾತರಿಗೆ ಈ ವರ್ಷ ಕೂಡ ವರುಣ ಆರಂಭದಲ್ಲಿ ಕೈ ಹಿಡಿಯದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಬಾಡುತ್ತಿವೆ. ಈ ಸಲ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಶೇ. 122ರಷ್ಟು ಹೆಚ್ಚು ಮಳೆ ಬಂದಿದೆ. ಮಾರ್ಚ್ ಆರಂಭದಿಂದ ಮೇ ಅಂತ್ಯದ ತನಕ ಅವಧಿಯಲ್ಲಿ ವಾಡಿಕೆ 7.86 ಸೆಂ.ಮೀ. ಇತ್ತು. ಆದರೆ 17.44 ಸೆಂ.ಮೀ. ಮಳೆ ಬಂದಿದೆ.</p>.<p>ಪೂರ್ವ ಮುಂಗಾರಿನಂತೆಯೇ ಮುಂಗಾರು ಹಂಗಾಮಿನಲ್ಲಿಯೂ ಉತ್ತಮ ಮಳೆಯಾಗುವ ನಿರೀಕ್ಷೆ ಅನ್ನದಾತನದಾಗಿತ್ತು. ಆ ನಿರೀಕ್ಷೆ ಸದ್ಯಕ್ಕೆ ಹುಸಿಯಾಗಿದ್ದು ತೇವಾಂಶ ಕೊರತೆಯಿಂದಾಗಿ ರೈತ ತಾನೇ ಬಿತ್ತನೆ ಮಾಡಿದ್ದ ಬೆಳೆಗಳನ್ನು ನೆಲಸಮ ಮಾಡುವ ಸಂಕಷ್ಟಕ್ಕೆ ಸಿಲುಕಿದ್ದಾನೆ. </p>.<p>ತಾಲ್ಲೂಕಿನ ಮಸಬ ಹಂಚಿನಾಳ ಗ್ರಾಮದಲ್ಲಿ ಹಲವು ರೈತರು ಹೆಸರು, ಮೆಕ್ಕೆಜೋಳ ಸೇರಿದಂತೆ ಇನ್ನಿತರ ಮುಂಗಾರು ಹಂಗಾಮಿನ ಬೆಳೆ ನಾಶ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದಾಗಿ ಬೆಳೆಗಳು ನೆಲದಲ್ಲಿಯೇ ಒಣಗಿ ಹೋಗಿವೆ. </p>.<p>‘ಎಂಟು ಎಕರೆ ಭೂಮಿಯಲ್ಲಿ ₹80 ಸಾವಿರ ಖರ್ಚು ಮಾಡಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೂಲಿ ಕಾರ್ಮಿಕರಿಗೆ ಹಣ ನೀಡಿದ್ದೆ. ಆ ಎಲ್ಲ ಹಣ ಹಾಳಾಗಿದೆ. ಮುಂದೆಯೂ ಮಳೆ ಕೈಕೊಟ್ಟರೆ ರೈತರ ಸ್ಥಿತಿ ಚಿಂತಾಜನಕವಾಗಲಿದೆ’ ಎಂದು ಬಸವರಾಜ ಚಟ್ಟಿ ಬೇಸರ ತೋಡಿಕೊಂಡರು.</p>.<div><blockquote>ತೇವಾಂಶದ ಕೊರತೆಯಿಂದ ಬೆಳೆಗಳು ಬಾಡುತ್ತಿದ್ದು ನಮ್ಮ ಗ್ರಾಮದಲ್ಲಿ ಐದಾರು ದಿನಗಳಿಂದ ಹಲವು ರೈತರು 30 ಎಕರೆಯಷ್ಟು ಬಾಡಿದ ಬೆಳೆಗಳನ್ನು ನಾಶ ಮಾಡಿದ್ದಾರೆ. </blockquote><span class="attribution">ನಿಂಗಪ್ಪ ಗೋಡೆಕಾರ್ ರೈತ</span></div>.<div><blockquote>ಮುಂಗಾರಿನ ಆರಂಭಿಕ ದಿನಗಳಲ್ಲಿ ಉತ್ತಮವಾಗಿ ಮಳೆಯಾಗಬೇಕಿತ್ತು. ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ಬಾಡಿ ಹೋಗಿವೆ. ಅಸಹಾಯಕನಾಗಿ ಬೆಳೆ ನಾಶ ಮಾಡಿದ್ದೇನೆ. </blockquote><span class="attribution"> ಬಸವರಾಜ ಚಟ್ಟಿ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ಮುಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣಕ್ಕೆ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಬಸವರಾಜ ಶಿವಪ್ಪ ಚಟ್ಟಿ ಎಂಬ ರೈತ ತನ್ನ ಎಂಟು ಎಕರೆ ಭೂಮಿಯಲ್ಲಿ ಉಳಿಮೆ ಮಾಡಿದ್ದ ಮೆಕ್ಕೆಜೋಳವನ್ನು ಬೇಸರದಿಂದಲೇ ಟ್ರ್ಯಾಕ್ಟರ್ನಿಂದ ನಾಶಪಡಿಸಿದ್ದಾರೆ. </p>.<p>ಕಳೆದ ವರ್ಷದ ಬರಗಾಲದಿಂದ ಕಂಗೆಟ್ಟಿದ್ದ ಅನ್ನದಾತರಿಗೆ ಈ ವರ್ಷ ಕೂಡ ವರುಣ ಆರಂಭದಲ್ಲಿ ಕೈ ಹಿಡಿಯದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಬಾಡುತ್ತಿವೆ. ಈ ಸಲ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಶೇ. 122ರಷ್ಟು ಹೆಚ್ಚು ಮಳೆ ಬಂದಿದೆ. ಮಾರ್ಚ್ ಆರಂಭದಿಂದ ಮೇ ಅಂತ್ಯದ ತನಕ ಅವಧಿಯಲ್ಲಿ ವಾಡಿಕೆ 7.86 ಸೆಂ.ಮೀ. ಇತ್ತು. ಆದರೆ 17.44 ಸೆಂ.ಮೀ. ಮಳೆ ಬಂದಿದೆ.</p>.<p>ಪೂರ್ವ ಮುಂಗಾರಿನಂತೆಯೇ ಮುಂಗಾರು ಹಂಗಾಮಿನಲ್ಲಿಯೂ ಉತ್ತಮ ಮಳೆಯಾಗುವ ನಿರೀಕ್ಷೆ ಅನ್ನದಾತನದಾಗಿತ್ತು. ಆ ನಿರೀಕ್ಷೆ ಸದ್ಯಕ್ಕೆ ಹುಸಿಯಾಗಿದ್ದು ತೇವಾಂಶ ಕೊರತೆಯಿಂದಾಗಿ ರೈತ ತಾನೇ ಬಿತ್ತನೆ ಮಾಡಿದ್ದ ಬೆಳೆಗಳನ್ನು ನೆಲಸಮ ಮಾಡುವ ಸಂಕಷ್ಟಕ್ಕೆ ಸಿಲುಕಿದ್ದಾನೆ. </p>.<p>ತಾಲ್ಲೂಕಿನ ಮಸಬ ಹಂಚಿನಾಳ ಗ್ರಾಮದಲ್ಲಿ ಹಲವು ರೈತರು ಹೆಸರು, ಮೆಕ್ಕೆಜೋಳ ಸೇರಿದಂತೆ ಇನ್ನಿತರ ಮುಂಗಾರು ಹಂಗಾಮಿನ ಬೆಳೆ ನಾಶ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದಾಗಿ ಬೆಳೆಗಳು ನೆಲದಲ್ಲಿಯೇ ಒಣಗಿ ಹೋಗಿವೆ. </p>.<p>‘ಎಂಟು ಎಕರೆ ಭೂಮಿಯಲ್ಲಿ ₹80 ಸಾವಿರ ಖರ್ಚು ಮಾಡಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೂಲಿ ಕಾರ್ಮಿಕರಿಗೆ ಹಣ ನೀಡಿದ್ದೆ. ಆ ಎಲ್ಲ ಹಣ ಹಾಳಾಗಿದೆ. ಮುಂದೆಯೂ ಮಳೆ ಕೈಕೊಟ್ಟರೆ ರೈತರ ಸ್ಥಿತಿ ಚಿಂತಾಜನಕವಾಗಲಿದೆ’ ಎಂದು ಬಸವರಾಜ ಚಟ್ಟಿ ಬೇಸರ ತೋಡಿಕೊಂಡರು.</p>.<div><blockquote>ತೇವಾಂಶದ ಕೊರತೆಯಿಂದ ಬೆಳೆಗಳು ಬಾಡುತ್ತಿದ್ದು ನಮ್ಮ ಗ್ರಾಮದಲ್ಲಿ ಐದಾರು ದಿನಗಳಿಂದ ಹಲವು ರೈತರು 30 ಎಕರೆಯಷ್ಟು ಬಾಡಿದ ಬೆಳೆಗಳನ್ನು ನಾಶ ಮಾಡಿದ್ದಾರೆ. </blockquote><span class="attribution">ನಿಂಗಪ್ಪ ಗೋಡೆಕಾರ್ ರೈತ</span></div>.<div><blockquote>ಮುಂಗಾರಿನ ಆರಂಭಿಕ ದಿನಗಳಲ್ಲಿ ಉತ್ತಮವಾಗಿ ಮಳೆಯಾಗಬೇಕಿತ್ತು. ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ಬಾಡಿ ಹೋಗಿವೆ. ಅಸಹಾಯಕನಾಗಿ ಬೆಳೆ ನಾಶ ಮಾಡಿದ್ದೇನೆ. </blockquote><span class="attribution"> ಬಸವರಾಜ ಚಟ್ಟಿ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>