<p><strong>ಕಾರಟಗಿ: </strong>ಪಟ್ಟಣದ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ನಲ್ಲಿ ಸೋಮವಾರ ರೈತ ದಿನಾಚರಣೆಯನ್ನು ವಿಶಿಷ್ಟ ಹಾಗೂ ವಿಭಿನ್ನವಾಗಿ ಆಚರಿಸಲಾಯಿತು.</p>.<p>ರೈತರನ್ನು ಶಾಲೆಗೆ ಅಹ್ವಾನಿಸಿ, ಅವರ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ರೈತರಿಗೆ ಹೂಮಾಲೆ ಹಾಕಿ, ಸನ್ಮಾನಿಸಿ, ಪಾದಪೂಜೆ ಮಾಡಿ ದೇಶಕ್ಕೆ ಅನ್ನ ನೀಡುವ ರೈತರ ಬಗ್ಗೆ ಗುಣಗಾನ ಮಾಡಲಾಯಿತು.</p>.<p>ಶಾಲಾ ಮುಖ್ಯಸ್ಥರಾದ ಮಲ್ಲಿಕಾರ್ಜುನ ಬಿಜಕಲ್, ವಿದ್ಯಾರ್ಥಿಗಳು ರೈತರ ವೇಷದಲ್ಲಿ ಕಂಗೊಳಿಸಿದ್ದು ಗಮನ ಸೆಳೆಯಿತು. ವಿದ್ಯಾರ್ಥಿಗಳೊಂದಿಗೆ ಭತ್ತದ ಜಮೀನುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಬೆಳೆಯು ಕೈಗೆ ಬರುವುದರ ಹಿಂದಿರುವ ಶ್ರಮದ ಬೆಲೆಯನ್ನು<br />ತಿಳಿಸಲಾಯಿತು.</p>.<p>ಆಡಳಿತ ಮಂಡಳಿಯ ಮುಖ್ಯಸ್ಥರಾದ ಮಲ್ಲಿಕಾರ್ಜುನ ಬಿಜಕಲ್ ಮತ್ತವರ ಧರ್ಮಪತ್ನಿ ಲೀಲಾ ಎಂ. ಬಿಜಕಲ್ ಅಹ್ವಾನಿಸಿದ ರೈತರಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡು, ಆತಿಥ್ಯ ನೀಡಿ ಗೌರವಿಸಿದರು.</p>.<p>ಲೀಲಾ ಮಲ್ಲಿಕಾರ್ಜುನ ಬಿಜಕಲ್ ಮಾತನಾಡಿ, ದೇಶದ ಬೆನ್ನೆಲುಬಾಗಿರುವ ರೈತರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೈತಿಕ ಧೈರ್ಯ, ಸ್ಥೈರ್ಯ ತುಂಬುವುದರೊಂದಿಗೆ ಅವರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ<br />ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ: </strong>ಪಟ್ಟಣದ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ನಲ್ಲಿ ಸೋಮವಾರ ರೈತ ದಿನಾಚರಣೆಯನ್ನು ವಿಶಿಷ್ಟ ಹಾಗೂ ವಿಭಿನ್ನವಾಗಿ ಆಚರಿಸಲಾಯಿತು.</p>.<p>ರೈತರನ್ನು ಶಾಲೆಗೆ ಅಹ್ವಾನಿಸಿ, ಅವರ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ರೈತರಿಗೆ ಹೂಮಾಲೆ ಹಾಕಿ, ಸನ್ಮಾನಿಸಿ, ಪಾದಪೂಜೆ ಮಾಡಿ ದೇಶಕ್ಕೆ ಅನ್ನ ನೀಡುವ ರೈತರ ಬಗ್ಗೆ ಗುಣಗಾನ ಮಾಡಲಾಯಿತು.</p>.<p>ಶಾಲಾ ಮುಖ್ಯಸ್ಥರಾದ ಮಲ್ಲಿಕಾರ್ಜುನ ಬಿಜಕಲ್, ವಿದ್ಯಾರ್ಥಿಗಳು ರೈತರ ವೇಷದಲ್ಲಿ ಕಂಗೊಳಿಸಿದ್ದು ಗಮನ ಸೆಳೆಯಿತು. ವಿದ್ಯಾರ್ಥಿಗಳೊಂದಿಗೆ ಭತ್ತದ ಜಮೀನುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಬೆಳೆಯು ಕೈಗೆ ಬರುವುದರ ಹಿಂದಿರುವ ಶ್ರಮದ ಬೆಲೆಯನ್ನು<br />ತಿಳಿಸಲಾಯಿತು.</p>.<p>ಆಡಳಿತ ಮಂಡಳಿಯ ಮುಖ್ಯಸ್ಥರಾದ ಮಲ್ಲಿಕಾರ್ಜುನ ಬಿಜಕಲ್ ಮತ್ತವರ ಧರ್ಮಪತ್ನಿ ಲೀಲಾ ಎಂ. ಬಿಜಕಲ್ ಅಹ್ವಾನಿಸಿದ ರೈತರಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡು, ಆತಿಥ್ಯ ನೀಡಿ ಗೌರವಿಸಿದರು.</p>.<p>ಲೀಲಾ ಮಲ್ಲಿಕಾರ್ಜುನ ಬಿಜಕಲ್ ಮಾತನಾಡಿ, ದೇಶದ ಬೆನ್ನೆಲುಬಾಗಿರುವ ರೈತರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೈತಿಕ ಧೈರ್ಯ, ಸ್ಥೈರ್ಯ ತುಂಬುವುದರೊಂದಿಗೆ ಅವರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ<br />ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>