<p>ಕುಷ್ಟಗಿ: ರೈತರು ಬೆಳೆದ ತೊಗರಿ ಬೆಳೆಯನ್ನು ಸರ್ಕಾರದ ಬೆಂಬಲ ಬೆಲೆಯಲ್ಲಿ ಖರೀದಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕಳೆದ ಒಂದು ತಿಂಗಳಿನಿಂದ ತೊಗರಿ ಬೆಳೆ ಕಟಾವು ನಡೆಯುತ್ತಿದೆ. ಮಾರುಕಟ್ಟೆಗೆ ರೈತರು ತೊಗರಿಯನ್ನು ಮಾರಾಟಕ್ಕೆ ತರುತ್ತಿದ್ದು, ಬೆಲೆ ಕುಸಿತದಿಂದ ಹಾನಿ ಅನುಭವಿಸುತ್ತಿದ್ದಾರೆ. ಸರ್ಕಾರ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿದರೆ ರೈತರನ್ನು ಸಂಕಷ್ಟದಿಂದ ಪಾರುಮಾಡಲು ಸಾಧ್ಯ’ ಎಂದರು.</p>.<p>‘ತೊಗರಿ ಖರೀದಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರಕ್ಕೆ ಎರಡು ತಿಂಗಳು ಮೊದಲೇ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಬೇಕಿತ್ತು. ಅದೇ ರೀತಿ ಮೆಕ್ಕೆಜೋಳ ಖರೀದಿ ವಿಚಾರದಲ್ಲೂ ವಿಳಂಬ ನೀತಿ ಅನುಸರಿಸಿದ್ದರಿಂದ ಮೆಕ್ಕೆಜೋಳ ಬೆಳೆಗಾರರು ತೊಂದರೆ ಅನುಭವಿಸಿದರು’ ಎಂದರು.</p>.<p>‘ತಡವಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಖರೀದಿ ಹೆಸರಿನಲ್ಲಿ ರೈತರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಈಗಲಾದರೂ ಹೋಬಳಿಗೆ ಒಂದರಂತೆ ಖರೀದಿ ಕೇಂದ್ರ ತೆರೆಯಬೇಕು. ಅಲ್ಲದೆ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್ಗೆ ₹1,200 ಪ್ರೋತ್ಸಾಹಧನ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ, ಪ್ರಮುಖರಾದ ಬಸವರಾಜ ನೆರೆಗಲ್, ದೇವಪ್ಪ ಕಂಬಳಿ, ರಗಡಪ್ಪ, ಹುಸೇನಪ್ಪ, ದ್ಯಾಮಮ್ಮ, ಹೊಳಿಯಮ್ಮ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ರೈತರು ಬೆಳೆದ ತೊಗರಿ ಬೆಳೆಯನ್ನು ಸರ್ಕಾರದ ಬೆಂಬಲ ಬೆಲೆಯಲ್ಲಿ ಖರೀದಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕಳೆದ ಒಂದು ತಿಂಗಳಿನಿಂದ ತೊಗರಿ ಬೆಳೆ ಕಟಾವು ನಡೆಯುತ್ತಿದೆ. ಮಾರುಕಟ್ಟೆಗೆ ರೈತರು ತೊಗರಿಯನ್ನು ಮಾರಾಟಕ್ಕೆ ತರುತ್ತಿದ್ದು, ಬೆಲೆ ಕುಸಿತದಿಂದ ಹಾನಿ ಅನುಭವಿಸುತ್ತಿದ್ದಾರೆ. ಸರ್ಕಾರ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿದರೆ ರೈತರನ್ನು ಸಂಕಷ್ಟದಿಂದ ಪಾರುಮಾಡಲು ಸಾಧ್ಯ’ ಎಂದರು.</p>.<p>‘ತೊಗರಿ ಖರೀದಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರಕ್ಕೆ ಎರಡು ತಿಂಗಳು ಮೊದಲೇ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಬೇಕಿತ್ತು. ಅದೇ ರೀತಿ ಮೆಕ್ಕೆಜೋಳ ಖರೀದಿ ವಿಚಾರದಲ್ಲೂ ವಿಳಂಬ ನೀತಿ ಅನುಸರಿಸಿದ್ದರಿಂದ ಮೆಕ್ಕೆಜೋಳ ಬೆಳೆಗಾರರು ತೊಂದರೆ ಅನುಭವಿಸಿದರು’ ಎಂದರು.</p>.<p>‘ತಡವಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಖರೀದಿ ಹೆಸರಿನಲ್ಲಿ ರೈತರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಈಗಲಾದರೂ ಹೋಬಳಿಗೆ ಒಂದರಂತೆ ಖರೀದಿ ಕೇಂದ್ರ ತೆರೆಯಬೇಕು. ಅಲ್ಲದೆ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್ಗೆ ₹1,200 ಪ್ರೋತ್ಸಾಹಧನ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ, ಪ್ರಮುಖರಾದ ಬಸವರಾಜ ನೆರೆಗಲ್, ದೇವಪ್ಪ ಕಂಬಳಿ, ರಗಡಪ್ಪ, ಹುಸೇನಪ್ಪ, ದ್ಯಾಮಮ್ಮ, ಹೊಳಿಯಮ್ಮ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>