ಆರೋಗ್ಯ ಇಲಾಖೆಯ ಸಿಬ್ಬಂದಿ ಸಭೆಯ ಉದ್ದೇಶ ಅರಿಯದೆ ಬೇರೆ ಬೇರೆ ವಿಷಯ ಮಂಡಿಸಿದರು. ಇದಕ್ಕೆ ಆಕ್ಷೇಪಿಸಿದ ತಾಲ್ಲೂಕು ಪಂಚಾಯಿತಿ ಇಒ ತಿಮ್ಮಪ್ಪ, ತಾಲ್ಲೂಕು ಪಂಚಾಯಿತಿಯಿಂದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಮಂಜೂರಾದ ಅನುದಾನ ಎಷ್ಟು, ಅದನ್ನು ಯಾವ ಯಾವ ಕೆಲಸಕ್ಕೆ ಎಷ್ಟೆಷ್ಟು ತಗೆದುಕೊಂಡಿದ್ದೀರಿ ಈದರ ಕ್ರಿಯಾಯೋಜನೆ ಇದ್ದರೆ ಸಲ್ಲಿಸಿ ಅನುಷ್ಠಾನಕ್ಕೆ ಅನುಮೋದನೆ ಸಲ್ಲಿಸಿ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕು ಎಂದು ತಿಳಿಸಿದರು.