ಸಂಘದ ರಾಜ್ಯ ಘಟಕದ ಅಧ್ಯಕ್ಷ ಶರಣೇಗೌಡ ಕೇಸರಹಟ್ಟಿ ಮಾತನಾಡಿ,‘ಕಳೆದ ವರ್ಷದಿಂದ ನರೇಗಾ ಯೋಜನೆ ಅಡಿ ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಉದ್ಯೋಗ ಖಾತರಿಯ ಕೋಟ್ಯಾಂತರ ಹಣ ಬಳಕೆ ಮಾಡಲಾಗಿದೆ. ಆದರೆ ಪ್ರಸಕ್ತ ಸಾಲಿನಲ್ಲಿ ಕೂಡ ಕೆರೆ ಅಭಿವೃದ್ಧಿ ಮಾಡಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮುಂದೆ ಬಂದಿದ್ದು, ನೀರಾವರಿ ಇಲಾಖೆ ಅನುದಾನವನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿಯಾಗಿ ನಾನಾ ಯೋಜನೆಗಳಲ್ಲಿ ಅನುದಾನ ಬಳಕೆ ಮಾಡಿಕೊಂಡು ಕೆರೆ ಅಭಿವೃದ್ಧಿ ಮಾಡಿದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ’ ಎಂದು ದೂರಿದರು.