ಅಕ್ಕಪಕ್ಕದ ತಾಲ್ಲೂಕುಗಳಾದ ಗಂಗಾವತಿ ಮತ್ತು ಬಳ್ಳಾರಿಯಿಂದ ಗೊಬ್ಬರ ತರಿಸಿ ರೈತರಿಗೆ ವಿತರಣೆಗೆ ಮುಂದಾಗುವ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಆದರೂ ಬೇಡಿಕೆಗೆ ತಕ್ಕಂತೆ ಯೂರಿಯಾ ಗೊಬ್ಬರ ಸಿಗುತ್ತಿಲ್ಲ. ಆದರೂ ಇನ್ನೆರಡು ದಿನಗಳಲ್ಲಿ ಗೊಬ್ಬರವನ್ನು ವಿವಿಧ ಸಹಕಾರ ಸಂಘಗಳ ಮೂಲಕ ರೈತರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಶಿವಕುಮಾರ ನಾಗಲಾಪೂರಮಠ ತಿಳಿಸಿದರು.