ಕೊಪ್ಪಳ ತಾಲ್ಲೂಕಿನ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮುನಿರಾಬಾದ್, ಹಿಟ್ನಾಳ, ಹುಲಿಗಿ, ಕಂಪಸಾಗರ, ಅಗಳಕೇರಾ, ಶಿವಪುರ, ಬಂಡಿಹರ್ಲಾಪುರ, ಬಸಾಪುರ ಸೇರಿ ಹಲವು ಗ್ರಾಮಗಳು ನೀರಾವರಿಗೆ ಒಳಪಟ್ಟಿವೆ. ಎಡದಂಡೆ ಮುಖ್ಯಕಾಲುವೆ ಗಂಗಾವತಿ, ಕಾರಟಗಿ ತಾಲ್ಲೂಕುಗಳನ್ನು ಒಳಗೊಂಡು ಮುಂದೆ ರಾಯಚೂರು ಜಿಲ್ಲೆಯನ್ನು ಪ್ರವೇಶಿಸುತ್ತದೆ.