ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣದಿಂದ ಪ್ರಗತಿ ಸಾಧ್ಯ’

Last Updated 26 ಜನವರಿ 2022, 11:15 IST
ಅಕ್ಷರ ಗಾತ್ರ

ಕನಕಗಿರಿ: ‘ಆರ್ಥಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಾದರೆ ಶಿಕ್ಷಣದ ಅವಶ್ಯಕತೆ ಇದೆ’ ಎಂದು ಪಟ್ಟಣ ಪಂಚಾಯಿತಿ ನೂತನ ಸದಸ್ಯ ಸುರೇಶ ಗುಗ್ಗಳಶೆಟ್ರ ತಿಳಿಸಿದರು.

ಇಲ್ಲಿನ ಎಪಿಎಂಸಿ ದಲ್ಲಾಳಿ ಅಂಗಡಿಯಲ್ಲಿ ಬಣಜಿಗ ಸಮಾಜದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಬಣಜಿಗರು ವ್ಯಾಪಾರದ ಜತೆಗೆ ತಮ್ಮ ಮಕ್ಕಳಿಗೆ ಉತ್ತಮ ಮತ್ತು ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ಸಿಮೆಂಟ್ ಕಾಂಕ್ರಿಟ್ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಹಾಗೂ ವಾರ್ಡ್‌ನ ಮತದಾರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಬಣಜಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸಪ್ಪ ಭತ್ತದ ಮಾತನಾಡಿದರು.

ಚಿತ್ರಕಲೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಮಾಜದ ವಿದ್ಯಾರ್ಥಿನಿ ರಕ್ಷಿತಾ ಪ್ರಕಾಶ ತೆಂಗಿನಕಾಯಿ ಅವರನ್ನು ಸನ್ಮಾನಿಸಲಾಯಿತು.

ಪ್ರಮುಖರಾದ ಬಸವರಾಜ ಗುಗ್ಗಳಶೆಟ್ರ, ವಿರೂಪಾಕ್ಷಪ್ಪ ಭತ್ತದ, ಸಂಗಪ್ಪ ತೆಂಗಿನಕಾಯಿ, ಮುನಿಯಪ್ಪ ಪ್ರಭುಶೆಟ್ರ, ಶರಣಪ್ಪ ಕರಡೋಣ, ಶ್ರೀಶೈಲ ಪಾಟೀಲ, ಶರಣಪ್ಪ ಕಲಕೇರಿ, ಪ್ರಕಾಶ ಹಾದಿಮನಿ, ಶಿವಕುಮಾರ ಕೋರಿಶೆಟ್ರ, ಅಮರೇಶ ಪಟ್ಟಣಶೆಟ್ರ, ಪ್ರಶಾಂತ ಪ್ರಭುಶೆಟ್ರ, ಪ್ರವೀಣ ಕೋರಿ, ಮಲ್ಲಿಕಾರ್ಜುನ ಹಾದಿಮನಿ ಹಾಗೂ ಮುದಿಯಪ್ಪ ಮೂಲಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT