<p>ಕೊಪ್ಪಳ: ‘ವ್ಯಕ್ತಿಯು ತಾನು ಅಧಿಕಾರದಲ್ಲಿದ್ದಾಗ ಮಾಡಿದ ಕಾರ್ಯಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ’ ಎಂದು ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.</p>.<p>ನಗರದ ಮೇಘರಾಜ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಒಂದು ಹುದ್ದೆಯಲ್ಲಿ ಎಷ್ಟು ದಿನ ಇರುತ್ತೇವೆ ಎನ್ನುವುದು ಮುಖ್ಯವಲ್ಲ. ಆ ಹುದ್ದೆಯಲ್ಲಿ ಇದ್ದಾಗ ಮಾಡಿದ ಕಾರ್ಯಗಳು ಮಾತ್ರ ಸದಾ ನೆನಪಿನಲ್ಲಿ ಉಳಿಯುತ್ತವೆ. ಸಂಘ ಅತ್ಯಂತ ಬೃಹತ್ ಸಂಘಟನೆಯಾಗಿದೆ. ದೇಶದಲ್ಲಿ ಮಾದರಿಯಾದ ಸಂಘಟನೆಯಾಗಿದೆ. ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಾದರೆ ಸಂಘದ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ನಾಗರಾಜ ಆರ್ ಜುಮ್ಮಣ್ಣನ್ನವರ ಮಾತನಾಡಿ,‘ನನ್ನ ಸೇವೆಯನ್ನು ಪರಿಗಣಿಸಿ ರಾಜ್ಯ ಅಧ್ಯಕ್ಷರು ಹುದ್ದೆ ನೀಡಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಸನ್ಮಾನದಿಂದ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕೇವಲ ಜಿಲ್ಲೆಯ ನೌಕರರ ಸಮಸ್ಯೆಗಳಿಗೆ ಮಾತ್ರ ಸೀಮಿತವಾಗಿದ್ದ ವ್ಯಾಪ್ತಿ ರಾಜ್ಯಕ್ಕೆ ವಿಸ್ತಾರವಾಗಿದೆ’ ಎಂದರು.</p>.<p>ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ ಮಾತನಾಡಿದರು.</p>.<p>ಅಂಗವಿಕಲನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೀರಪ್ಪ ಅಂಡಗಿ, ಶಂಕರಗೌಡ ಮಾಲಿಪಾಟೀಲ, ಮುಸ್ತಾಪ ಕುದರಿಮೊತಿ, ಸುಶೀಲೇಂದ್ರ ದೇಶಪಾಂಡೆ, ಶ್ರೀನಿವಾಸ,ವೈ.ಜಿ.ಪಾಟೀಲ, ಸರ್ದಾರ ಅಲಿ, ವೆಂಕಟ ಮಧಸೂದನ್ ಹಾಗೂ ಅಣ್ಣಪ್ಪ ಹಳ್ಳಿ ಇದ್ದರು.</p>.<p>ಸುರೇಶ ಮೊರಗೇರಿ ನಿರೂಪಿಸಿದರು. ಹನುಮಂತಪ್ಪ ಕುರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ‘ವ್ಯಕ್ತಿಯು ತಾನು ಅಧಿಕಾರದಲ್ಲಿದ್ದಾಗ ಮಾಡಿದ ಕಾರ್ಯಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ’ ಎಂದು ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.</p>.<p>ನಗರದ ಮೇಘರಾಜ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಒಂದು ಹುದ್ದೆಯಲ್ಲಿ ಎಷ್ಟು ದಿನ ಇರುತ್ತೇವೆ ಎನ್ನುವುದು ಮುಖ್ಯವಲ್ಲ. ಆ ಹುದ್ದೆಯಲ್ಲಿ ಇದ್ದಾಗ ಮಾಡಿದ ಕಾರ್ಯಗಳು ಮಾತ್ರ ಸದಾ ನೆನಪಿನಲ್ಲಿ ಉಳಿಯುತ್ತವೆ. ಸಂಘ ಅತ್ಯಂತ ಬೃಹತ್ ಸಂಘಟನೆಯಾಗಿದೆ. ದೇಶದಲ್ಲಿ ಮಾದರಿಯಾದ ಸಂಘಟನೆಯಾಗಿದೆ. ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಾದರೆ ಸಂಘದ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ನಾಗರಾಜ ಆರ್ ಜುಮ್ಮಣ್ಣನ್ನವರ ಮಾತನಾಡಿ,‘ನನ್ನ ಸೇವೆಯನ್ನು ಪರಿಗಣಿಸಿ ರಾಜ್ಯ ಅಧ್ಯಕ್ಷರು ಹುದ್ದೆ ನೀಡಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಸನ್ಮಾನದಿಂದ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕೇವಲ ಜಿಲ್ಲೆಯ ನೌಕರರ ಸಮಸ್ಯೆಗಳಿಗೆ ಮಾತ್ರ ಸೀಮಿತವಾಗಿದ್ದ ವ್ಯಾಪ್ತಿ ರಾಜ್ಯಕ್ಕೆ ವಿಸ್ತಾರವಾಗಿದೆ’ ಎಂದರು.</p>.<p>ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ ಮಾತನಾಡಿದರು.</p>.<p>ಅಂಗವಿಕಲನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೀರಪ್ಪ ಅಂಡಗಿ, ಶಂಕರಗೌಡ ಮಾಲಿಪಾಟೀಲ, ಮುಸ್ತಾಪ ಕುದರಿಮೊತಿ, ಸುಶೀಲೇಂದ್ರ ದೇಶಪಾಂಡೆ, ಶ್ರೀನಿವಾಸ,ವೈ.ಜಿ.ಪಾಟೀಲ, ಸರ್ದಾರ ಅಲಿ, ವೆಂಕಟ ಮಧಸೂದನ್ ಹಾಗೂ ಅಣ್ಣಪ್ಪ ಹಳ್ಳಿ ಇದ್ದರು.</p>.<p>ಸುರೇಶ ಮೊರಗೇರಿ ನಿರೂಪಿಸಿದರು. ಹನುಮಂತಪ್ಪ ಕುರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>