ಕೊವೀಡ್ ಹಿನ್ನೆಲೆಯಲ್ಲಿ ಸರ್ಕಾರವು ಎಸ್.ಸಿ /ಎಸ್.ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಕಟ್ಟಲು ವಿನಾಯಿತಿ ನೀಡಿದೆ. ಆದರೆ, ಕಾಲೇಜಿನ ಪ್ರಾಂಶುಪಾಲರು ಸರ್ವಾಧಿಕಾರಿತನ ತೋರಿಸಿ ವಿದ್ಯಾರ್ಥಿಗಳಿಗೆ ತೊಂದರೆ ಮಾಡುತ್ತಿದ್ದಾರೆ. ಹಾಗಾಗಿ ಈ ಕೂಡಲೇ ಸರ್ಕಾರದ ಸುತ್ತೋಲೆ ಪ್ರಕಾರ 2ಬಿ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಬೇಕು. ಪೂರ್ಣ ಹಣ ಕಟ್ಟಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.