<p><strong>ಯಲಬುರ್ಗಾ:</strong> ದೇಶದಲ್ಲಿ ಜಾತಿ, ಧರ್ಮ, ದೇವರು ಹೆಸರಿನಲ್ಲಿ ಹೊಡೆದಾಡಿಕೊಂಡು ಮೃತರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ. ಜಾತಿ ಎನ್ನುವುದು ದೇಶ ನಾಶ ಮಾಡುವ ಒಂದು ಪಿಡುಗಾಗಿದೆ ಎಂದು ಅತ್ತಿವೇರಿ ಬಸವಧಾಮದ ಮಾತೆ ಬಸವೇಶ್ವರಿ ವಿಷಾದಿಸಿದರು.</p>.<p>ಮರಕಟ್ಟ ಗ್ರಾಮದಲ್ಲಿ ಶುಕ್ರವಾರ ಶಿವಯ್ಯ ಸ್ವಾಮೀಜಿ ಅವರ 8ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ 99ನೇ ಮಾಸಿಕ ಶಿವಾನುಭವ ಕಾರ್ಯಕ್ರಮ, ಗ್ರಾಮದ ಬಸವಕೇಂದ್ರ 4ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಣಿಗಳಂತೆ ವಾಸಿಸುತ್ತಿದ್ದ ಮನುಷ್ಯ, ಮೊದಲು ಯಾವುದೇ ಜಾತಿಯನ್ನು ಮಾಡಿಕೊಂಡಿರಲಿಲ್ಲ. ತಿಳುವಳಿಕೆ ಬಂದಾಗಲೆಲ್ಲಾ ವಿವಿಧ ಧಾರ್ಮಿಕ ಪದ್ಧತಿ, ಮೂಢನಂಬಿಕೆ, ಜಾತಿ ಎಂದು ಸೃಷ್ಟಿಸಿಕೊಂಡು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ ಎಂದು ಅಭಿಪ್ರಾಯಪಟ್ಟರು.</p>.<p>ರಾಜೇಶ ಸಸಿಮಠ ಮಾತನಾಡಿ, ಮಾದರಿ ವ್ಯಕ್ತಿಯ ವ್ಯಕ್ತಿತ್ವವನ್ನು ನಾವೇಲ್ಲರೂ ಅನುಸರಿಸುವ ಮೂಲಕ ಸುಂದರ ಸಮಾಜವನ್ನು ನಿರ್ಮಾಣ ಮಾಡಬೇಕಾದ ಅನಿವಾರ್ಯತೆಯಿದೆ. ಶರಣ ತತ್ವವು ಎಲ್ಲರೂ ಸಮಾನರು ಎಂದು ಹೇಳುತ್ತದೆ. ಶರಣರನ್ನು ಸ್ಮರಿಸುವ ನಾವುಗಳು ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಆರೋಗ್ಯ ಇಲಾಖೆಯ ಅಧಿಕಾರಿ ಶಂಕ್ರಪ್ಪ ಅಂಗಡಿ, ಬಸವಾದಿ ಶರಣರ ವಚನಗಳನ್ನು ಮತ್ತು ಆರೂಢರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಪುಟ್ಟ ಮರಕಟ್ಟ ಗ್ರಾಮದ ಶಿವಾನಂದ ಮಠದಲ್ಲಿ ನಿರಂತರವಾಗಿ ಮಾಸಿಕ ಶಿವಾನುಭವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಹನುಮಗೌಡ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ವಿರುಪಾಕ್ಷಯ್ಯ ಸ್ವಾಮೀಜಿ ಕಲ್ಲಭಾವಿ, ಶರಣಪ್ಪ ಗುಂಗಾಡಿ, ಬಸವರಾಜ ಇಂಗಳದಾಳ, ಅಮರೇಶಪ್ಪ ಕೋಡಿಹಳ್ಳಿ, ಶರಣಪ್ಪ ಹಸಬಿ, ಬಸವರಾಜಪ್ಪ ತುರ್ವಿಹಾಳ, ಮಾದೇವಪ್ಪ ಚನ್ನಳ್ಳಿ, ಅಮರೇಶ ಬಳ್ಳಾರಿ ಇದ್ದರು.</p>.<p>–––––––––––––––</p>.<p>ಎರಡನೇ ಮಹಾಯುದ್ಧದಲ್ಲಿ ಸತ್ತ ಜನರಿಗಿಂತ ದೇಶದಲ್ಲಿ ಹೆಚ್ಚಿನ ಜನರು ಜಾತಿ, ಧರ್ಮ, ದೇವರ ಹೆಸರಿನಲ್ಲಿ ಹೊಡೆದಾಡಿ ಸತ್ತಿದ್ದಾರೆ. ಮಾತೆ ಬಸವೇಶ್ವರಿ, ಅತ್ತಿವೇರಿ ಬಸವಧಾಮ ಪೀಠಾಧ್ಯಕ್ಷೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ದೇಶದಲ್ಲಿ ಜಾತಿ, ಧರ್ಮ, ದೇವರು ಹೆಸರಿನಲ್ಲಿ ಹೊಡೆದಾಡಿಕೊಂಡು ಮೃತರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ. ಜಾತಿ ಎನ್ನುವುದು ದೇಶ ನಾಶ ಮಾಡುವ ಒಂದು ಪಿಡುಗಾಗಿದೆ ಎಂದು ಅತ್ತಿವೇರಿ ಬಸವಧಾಮದ ಮಾತೆ ಬಸವೇಶ್ವರಿ ವಿಷಾದಿಸಿದರು.</p>.<p>ಮರಕಟ್ಟ ಗ್ರಾಮದಲ್ಲಿ ಶುಕ್ರವಾರ ಶಿವಯ್ಯ ಸ್ವಾಮೀಜಿ ಅವರ 8ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ 99ನೇ ಮಾಸಿಕ ಶಿವಾನುಭವ ಕಾರ್ಯಕ್ರಮ, ಗ್ರಾಮದ ಬಸವಕೇಂದ್ರ 4ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಣಿಗಳಂತೆ ವಾಸಿಸುತ್ತಿದ್ದ ಮನುಷ್ಯ, ಮೊದಲು ಯಾವುದೇ ಜಾತಿಯನ್ನು ಮಾಡಿಕೊಂಡಿರಲಿಲ್ಲ. ತಿಳುವಳಿಕೆ ಬಂದಾಗಲೆಲ್ಲಾ ವಿವಿಧ ಧಾರ್ಮಿಕ ಪದ್ಧತಿ, ಮೂಢನಂಬಿಕೆ, ಜಾತಿ ಎಂದು ಸೃಷ್ಟಿಸಿಕೊಂಡು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ ಎಂದು ಅಭಿಪ್ರಾಯಪಟ್ಟರು.</p>.<p>ರಾಜೇಶ ಸಸಿಮಠ ಮಾತನಾಡಿ, ಮಾದರಿ ವ್ಯಕ್ತಿಯ ವ್ಯಕ್ತಿತ್ವವನ್ನು ನಾವೇಲ್ಲರೂ ಅನುಸರಿಸುವ ಮೂಲಕ ಸುಂದರ ಸಮಾಜವನ್ನು ನಿರ್ಮಾಣ ಮಾಡಬೇಕಾದ ಅನಿವಾರ್ಯತೆಯಿದೆ. ಶರಣ ತತ್ವವು ಎಲ್ಲರೂ ಸಮಾನರು ಎಂದು ಹೇಳುತ್ತದೆ. ಶರಣರನ್ನು ಸ್ಮರಿಸುವ ನಾವುಗಳು ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಆರೋಗ್ಯ ಇಲಾಖೆಯ ಅಧಿಕಾರಿ ಶಂಕ್ರಪ್ಪ ಅಂಗಡಿ, ಬಸವಾದಿ ಶರಣರ ವಚನಗಳನ್ನು ಮತ್ತು ಆರೂಢರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಪುಟ್ಟ ಮರಕಟ್ಟ ಗ್ರಾಮದ ಶಿವಾನಂದ ಮಠದಲ್ಲಿ ನಿರಂತರವಾಗಿ ಮಾಸಿಕ ಶಿವಾನುಭವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಹನುಮಗೌಡ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ವಿರುಪಾಕ್ಷಯ್ಯ ಸ್ವಾಮೀಜಿ ಕಲ್ಲಭಾವಿ, ಶರಣಪ್ಪ ಗುಂಗಾಡಿ, ಬಸವರಾಜ ಇಂಗಳದಾಳ, ಅಮರೇಶಪ್ಪ ಕೋಡಿಹಳ್ಳಿ, ಶರಣಪ್ಪ ಹಸಬಿ, ಬಸವರಾಜಪ್ಪ ತುರ್ವಿಹಾಳ, ಮಾದೇವಪ್ಪ ಚನ್ನಳ್ಳಿ, ಅಮರೇಶ ಬಳ್ಳಾರಿ ಇದ್ದರು.</p>.<p>–––––––––––––––</p>.<p>ಎರಡನೇ ಮಹಾಯುದ್ಧದಲ್ಲಿ ಸತ್ತ ಜನರಿಗಿಂತ ದೇಶದಲ್ಲಿ ಹೆಚ್ಚಿನ ಜನರು ಜಾತಿ, ಧರ್ಮ, ದೇವರ ಹೆಸರಿನಲ್ಲಿ ಹೊಡೆದಾಡಿ ಸತ್ತಿದ್ದಾರೆ. ಮಾತೆ ಬಸವೇಶ್ವರಿ, ಅತ್ತಿವೇರಿ ಬಸವಧಾಮ ಪೀಠಾಧ್ಯಕ್ಷೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>