<p><strong>ಕನಕಗಿರಿ:</strong> ರಾಜಕೀಯ ಕುತಂತ್ರದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.</p>.<p>ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯ ನಂತರ ಪತ್ರಕರ್ತರ ಜತೆಗೆ ಮಾತನಾಡಿದರು.</p>.<p>‘ರಾಜ್ಯಪಾಲರ ಭವನ ಬಿಜೆಪಿ ಕಚೇರಿಯಾಗಿದೆ. ಸಿಎಂ ಮುಡಾ ವಿಚಾರ ಬಿಜೆಪಿ ಅಧಿಕಾರದಲ್ಲಿ ನಡೆದಿದ್ದು ಯಾವುದಕ್ಕೂ ಶಿಫಾರಸು, ಸಹಿ ಇಲ್ಲ. ಆದರೂ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಸಲುವಾಗಿ ಷಡ್ಯಂತ್ರ ಮಾಡಲಾಗಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಿಕೊಳ್ಳಲು ಬಿಜೆಪಿ ಅವರಿಗೆ ಆಗುತ್ತಿಲ್ಲ, ಅವರನ್ನು ಕುಗ್ಗಿಸುವ ಯತ್ನ ಎಲ್ಲರಿಗೂ ಗೊತ್ತಾಗಿದೆ’ ಎಂದರು. </p>.<p>‘ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯವರ ಬಗ್ಗೆ ಮಾತನಾಡುವುದಕ್ಕೆ ಯಾವುದೇ ನೈತಿಕ ಹಕ್ಕು ಇಲ್ಲ. ಕುಮಾರಸ್ವಾಮಿ ಅವರ ಮೇಲೆ ಹಲವಾರು ಪ್ರಕರಣಗಳಿವೆ. ಕೇಂದ್ರ ಸರ್ಕಾರ ಸಿಬಿಐ, ಇಡಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ರಾಜಕೀಯ ಕುತಂತ್ರದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.</p>.<p>ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯ ನಂತರ ಪತ್ರಕರ್ತರ ಜತೆಗೆ ಮಾತನಾಡಿದರು.</p>.<p>‘ರಾಜ್ಯಪಾಲರ ಭವನ ಬಿಜೆಪಿ ಕಚೇರಿಯಾಗಿದೆ. ಸಿಎಂ ಮುಡಾ ವಿಚಾರ ಬಿಜೆಪಿ ಅಧಿಕಾರದಲ್ಲಿ ನಡೆದಿದ್ದು ಯಾವುದಕ್ಕೂ ಶಿಫಾರಸು, ಸಹಿ ಇಲ್ಲ. ಆದರೂ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಸಲುವಾಗಿ ಷಡ್ಯಂತ್ರ ಮಾಡಲಾಗಿದೆ’ ಎಂದರು.</p>.<p>‘ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಿಕೊಳ್ಳಲು ಬಿಜೆಪಿ ಅವರಿಗೆ ಆಗುತ್ತಿಲ್ಲ, ಅವರನ್ನು ಕುಗ್ಗಿಸುವ ಯತ್ನ ಎಲ್ಲರಿಗೂ ಗೊತ್ತಾಗಿದೆ’ ಎಂದರು. </p>.<p>‘ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯವರ ಬಗ್ಗೆ ಮಾತನಾಡುವುದಕ್ಕೆ ಯಾವುದೇ ನೈತಿಕ ಹಕ್ಕು ಇಲ್ಲ. ಕುಮಾರಸ್ವಾಮಿ ಅವರ ಮೇಲೆ ಹಲವಾರು ಪ್ರಕರಣಗಳಿವೆ. ಕೇಂದ್ರ ಸರ್ಕಾರ ಸಿಬಿಐ, ಇಡಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>