<p><strong>ಗಂಗಾವತಿ:</strong> ‘ಗಂಗಾಮತ ಸಮಾಜವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಕಳೆದ 40 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ರಾಜಕಾರಣಿಗಳು ಸ್ಪಂದಿಸುತ್ತಿಲ್ಲ. ಸಮಾಜವನ್ನು ಕಡೆಗಣಿಸುತ್ತಿದ್ದಾರೆ’ ಎಂದು ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಈ.ಧನರಾಜ ಆರೋಪಿಸಿದರು.</p>.<p>‘ಗಂಗಾಮತ, ಕೋಲಿ, ಮೊಗವೀರ ಸೇರಿದಂತೆ 39 ಪರ್ಯಾಯ ಪದಗಳಿಂದ ಗುರುತಿಸಿಕೊಂಡಿರುವ ಸಮಾಜ ದೇಶದ 9 ರಾಜ್ಯಗಳಲ್ಲಿ ಎಸ್ಟಿ ಪಟ್ಟಿಯಲ್ಲಿದೆ. ಆದರೂ ಪದೇ, ಪದೇ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ’ ಎಂದರು.</p>.<p>‘ಸಮಾಜ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಸುಣಗಾರಿಕೆ, ಮೀನುಗಾರಿಕೆ ಸೇರಿ ಹತ್ತು ಹಲವು ಸಾಂಪ್ರದಾಯಿಕ ಕಸಬುಗಳಲ್ಲಿ ತೊಡಗಿಕೊಂಡಿದೆ. ಈ ಹಿಂದೆ ಮೀಸಲಾತಿ ಭರವಸೆ ನೀಡಿ ಹಲವು ಪಕ್ಷಗಳು ಅಧಿಕಾರಕ್ಕೆ ಬಂದವು, ಆದರೆ ಬೇಡಿಕೆ ಈಡೇರಿಸಲಿಲ್ಲ’ ಎಂದು ದೂರಿದರು.</p>.<p>‘ಮಾನವಶಾಸ್ತ್ರ, ಕುಲಶಾಸ್ತ್ರ, ಬುಡಕಟ್ಟು ಅಧ್ಯಯನದ ಆಧಾರದನ್ವಯ ನಮ್ಮ ಸಮಾಜ ಎಸ್ಟಿ ಪಟ್ಟಿಗೆ ಸೇರಲು ತಾಂತ್ರಿಕವಾಗಿ ಬಲಿಷ್ಟವಾಗಿದೆ. ಕೇಂದ್ರ ಸರ್ಕಾರದ ಅಪ್ಪಣೆ ಬೇಕಾಗಿದೆ. ಎರಡು-ಮೂರು ತಿಂಗಳಲ್ಲಿ ನಮ್ಮ ಬೇಡಿಕೆ ಈಡೇರದೆ ಹೋದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಸಿದರು.</p>.<p>ಅಂಬಿಗರ ಚೌಡಯ್ಯ ಯುವಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಶ ಭಟಾರಿ ಮಾತನಾಡಿ,‘ನಮ್ಮ ಸಮಾಜ ತೀರಾ ಹಿಂದುಳಿದ ಸಮಾಜವಾಗಿದೆ. ಬಹುದಿನದ ಬೇಡಿಕೆಯಾಗಿರುವ ಎಸ್ಟಿ ಮೀಸಲಾತಿಯನ್ನು ಸರ್ಕಾರ ನೀಡಬೇಕು. ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು’ ಎಂದು ಹೇಳಿದರು.</p>.<p>ಸಮಾಜದ ಪ್ರಮುಖರಾದ ಬಿ.ಅಶೋಕಪ್ಪ, ಅಂಬಿಗರ ಆಂಜಿನಪ್ಪ, ಎಚ್.ವೈ.ಮನಗೂಳಿ, ಹುಲಗಪ್ಪ, ಯಮನೂರಪ್ಪ ಹಾಗೂ ಮಾರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘ಗಂಗಾಮತ ಸಮಾಜವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಕಳೆದ 40 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ರಾಜಕಾರಣಿಗಳು ಸ್ಪಂದಿಸುತ್ತಿಲ್ಲ. ಸಮಾಜವನ್ನು ಕಡೆಗಣಿಸುತ್ತಿದ್ದಾರೆ’ ಎಂದು ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಈ.ಧನರಾಜ ಆರೋಪಿಸಿದರು.</p>.<p>‘ಗಂಗಾಮತ, ಕೋಲಿ, ಮೊಗವೀರ ಸೇರಿದಂತೆ 39 ಪರ್ಯಾಯ ಪದಗಳಿಂದ ಗುರುತಿಸಿಕೊಂಡಿರುವ ಸಮಾಜ ದೇಶದ 9 ರಾಜ್ಯಗಳಲ್ಲಿ ಎಸ್ಟಿ ಪಟ್ಟಿಯಲ್ಲಿದೆ. ಆದರೂ ಪದೇ, ಪದೇ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ’ ಎಂದರು.</p>.<p>‘ಸಮಾಜ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಸುಣಗಾರಿಕೆ, ಮೀನುಗಾರಿಕೆ ಸೇರಿ ಹತ್ತು ಹಲವು ಸಾಂಪ್ರದಾಯಿಕ ಕಸಬುಗಳಲ್ಲಿ ತೊಡಗಿಕೊಂಡಿದೆ. ಈ ಹಿಂದೆ ಮೀಸಲಾತಿ ಭರವಸೆ ನೀಡಿ ಹಲವು ಪಕ್ಷಗಳು ಅಧಿಕಾರಕ್ಕೆ ಬಂದವು, ಆದರೆ ಬೇಡಿಕೆ ಈಡೇರಿಸಲಿಲ್ಲ’ ಎಂದು ದೂರಿದರು.</p>.<p>‘ಮಾನವಶಾಸ್ತ್ರ, ಕುಲಶಾಸ್ತ್ರ, ಬುಡಕಟ್ಟು ಅಧ್ಯಯನದ ಆಧಾರದನ್ವಯ ನಮ್ಮ ಸಮಾಜ ಎಸ್ಟಿ ಪಟ್ಟಿಗೆ ಸೇರಲು ತಾಂತ್ರಿಕವಾಗಿ ಬಲಿಷ್ಟವಾಗಿದೆ. ಕೇಂದ್ರ ಸರ್ಕಾರದ ಅಪ್ಪಣೆ ಬೇಕಾಗಿದೆ. ಎರಡು-ಮೂರು ತಿಂಗಳಲ್ಲಿ ನಮ್ಮ ಬೇಡಿಕೆ ಈಡೇರದೆ ಹೋದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಸಿದರು.</p>.<p>ಅಂಬಿಗರ ಚೌಡಯ್ಯ ಯುವಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಶ ಭಟಾರಿ ಮಾತನಾಡಿ,‘ನಮ್ಮ ಸಮಾಜ ತೀರಾ ಹಿಂದುಳಿದ ಸಮಾಜವಾಗಿದೆ. ಬಹುದಿನದ ಬೇಡಿಕೆಯಾಗಿರುವ ಎಸ್ಟಿ ಮೀಸಲಾತಿಯನ್ನು ಸರ್ಕಾರ ನೀಡಬೇಕು. ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು’ ಎಂದು ಹೇಳಿದರು.</p>.<p>ಸಮಾಜದ ಪ್ರಮುಖರಾದ ಬಿ.ಅಶೋಕಪ್ಪ, ಅಂಬಿಗರ ಆಂಜಿನಪ್ಪ, ಎಚ್.ವೈ.ಮನಗೂಳಿ, ಹುಲಗಪ್ಪ, ಯಮನೂರಪ್ಪ ಹಾಗೂ ಮಾರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>