<p><strong>ಕನಕಗಿರಿ</strong>: ಮೇ 20ರಂದು ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಫಲಾನುಭವಿಗಳ ಸುರಕ್ಷತೆ ಕಡೆಗೆ ಗಮನ ಹರಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಫಲಾನುಭವಿಗಳನ್ನು ಕರೆದುಕೊಂಡು ಹೋಗುವುದು ಹಾಗೂ ಪುನಃ ಅವರವರ ಊರಿಗೆ ಬಿಡುವ ಕಡೆಗೆ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ನಿಗಾ ವಹಿಸಬೇಕು. ಈ ಬಗ್ಗೆ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ತಿಳಿಸಿದರು.</p>.<p>‘ಮೇ 19ರಂದು ಎಲ್ಲಾ ನೋಡಲ್ ಅಧಿಕಾರಿಗಳು, ಮೇಲ್ವಿಚಾರಕರು ಗ್ರಾಮಗಳಿಗೆ ತೆರಳಿ ಫಲಾನುಭವಿಗಳಿಗೆ ಮಾಹಿತಿ ನೀಡಿ. ಮೇ 20ರಂದು ಬಸ್ನಲ್ಲಿ ಕರೆತಂದು ಅದೇ ದಿನ ಪುನಃ ಅವರ ಗ್ರಾಮಗಳಿಗೆ ಸುರಕ್ಷಿತವಾಗಿ ತಲುಪಿಸಬೇಕು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ<br /> ಸಹಾಯಕ ನಿರ್ದೇಶಕಿ ಶೃತಿ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಅರುಣಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಮೇ 20ರಂದು ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಫಲಾನುಭವಿಗಳ ಸುರಕ್ಷತೆ ಕಡೆಗೆ ಗಮನ ಹರಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಫಲಾನುಭವಿಗಳನ್ನು ಕರೆದುಕೊಂಡು ಹೋಗುವುದು ಹಾಗೂ ಪುನಃ ಅವರವರ ಊರಿಗೆ ಬಿಡುವ ಕಡೆಗೆ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ನಿಗಾ ವಹಿಸಬೇಕು. ಈ ಬಗ್ಗೆ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ತಿಳಿಸಿದರು.</p>.<p>‘ಮೇ 19ರಂದು ಎಲ್ಲಾ ನೋಡಲ್ ಅಧಿಕಾರಿಗಳು, ಮೇಲ್ವಿಚಾರಕರು ಗ್ರಾಮಗಳಿಗೆ ತೆರಳಿ ಫಲಾನುಭವಿಗಳಿಗೆ ಮಾಹಿತಿ ನೀಡಿ. ಮೇ 20ರಂದು ಬಸ್ನಲ್ಲಿ ಕರೆತಂದು ಅದೇ ದಿನ ಪುನಃ ಅವರ ಗ್ರಾಮಗಳಿಗೆ ಸುರಕ್ಷಿತವಾಗಿ ತಲುಪಿಸಬೇಕು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ<br /> ಸಹಾಯಕ ನಿರ್ದೇಶಕಿ ಶೃತಿ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಅರುಣಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>