<p><strong>ಕಾರಟಗಿ:</strong> ಪಟ್ಟಣದ ಎಲ್ಲೆಂದರಲ್ಲಿ ಮಾಂಸ ಮಾರಾಟದ ಅಂಗಡಿಗಳು ಆರಂಭಗೊಂಡಿದ್ದು, ಸ್ವಚ್ಛತೆಗೆ ಸಮಸ್ಯೆಯಾಗಿದೆ. 3 ದಿನಗಳ ಒಳಗೆ ಪಟ್ಟಣದಾದ್ಯಂತ ಇರುವ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ಮಾಂಸ ಮಾರಾಟ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ವೀರೇಶ ಸಾಲೋಣಿ ಹೇಳಿದರು.</p>.<p>ಪಟ್ಟಣದ ಗ್ರಾಮೀಣ ಸಂತೆ ಮಾರುಕಟ್ಟೆಯಲ್ಲಿರುವ ಮಾಂಸ ಮಾರಾಟದ ಅಂಗಡಿಗಳಿಗೆ ಸೋಮವಾರ ಪುರಸಭೆ ಸದಸ್ಯರು, ಬೆಂಬಲಿಗರೊಂದಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜನರು ದೂರಿದಾಗ ಅಂಗಡಿಗಳನ್ನು ತೆರವುಗೊಳಿಸಿ ಬಳಿಕ ಮಾರಾಟಕ್ಕೆ ಅನುವು ಮಾಡಿಕೊಟ್ಟ ಪುರಸಭೆ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದೇ ವೇಳೆ ಪುರಸಭೆ ಸದಸ್ಯರಾದ ರಾಜಶೇಖರ ಸಿರಿಗೇರಿ, ಆನಂದ ಮ್ಯಾಗಳಮನಿ ಮಾರುಕಟ್ಟೆಯಲ್ಲಿಯ ಸಮಸ್ಯೆಗಳನ್ನು ಪುರಸಭೆ ಮುಖ್ಯಾಧಿಕಾರಿಗೆ ಮನವರಿಕೆ ಮಾಡಿ, ವಿವಿಧೆಡೆ ಇರುವ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡ ಮರಿಯಪ್ಪ ಮಾತನಾಡಿ, ಎಲ್ಲಾ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಿ, ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಕೋರಿದರು. ಆರೋಗ್ಯ ನಿರೀಕ್ಷಕಿ ಭೇಟಿ ನೀಡಿ, ವಿಷಯವನ್ನು ಮುಖ್ಯಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.</p>.<p>ಮುಖಂಡರಾದ ಬಸವರಾಜ ಎತ್ತಿನಮನಿ, ಧನಂಜಯ್ ಎಲಿಗಾರ, ಚಿಕನ್ ಮಾರಾಟಗಾರರಾದ ಹೊನ್ನೂರಸಾಬ, ಜಾವೇದ ಖುರೇಶಿ, ಗಫೂರ್, ಜಿಲಾನಿಪಾಶಾ, ಹುಸೇನ್ಸಾಬ, ಮೌಲಾಸಾಬ, ಖಾದರಸಾಬ, ಸಮದಾನಿ, ರಾಜಾಹುಸೇನ್, ಮಕ್ಬೂಲ್ಸಾಬ, ನಬಿಸಾಬ, ಶರ್ಮಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಪಟ್ಟಣದ ಎಲ್ಲೆಂದರಲ್ಲಿ ಮಾಂಸ ಮಾರಾಟದ ಅಂಗಡಿಗಳು ಆರಂಭಗೊಂಡಿದ್ದು, ಸ್ವಚ್ಛತೆಗೆ ಸಮಸ್ಯೆಯಾಗಿದೆ. 3 ದಿನಗಳ ಒಳಗೆ ಪಟ್ಟಣದಾದ್ಯಂತ ಇರುವ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ಮಾಂಸ ಮಾರಾಟ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ವೀರೇಶ ಸಾಲೋಣಿ ಹೇಳಿದರು.</p>.<p>ಪಟ್ಟಣದ ಗ್ರಾಮೀಣ ಸಂತೆ ಮಾರುಕಟ್ಟೆಯಲ್ಲಿರುವ ಮಾಂಸ ಮಾರಾಟದ ಅಂಗಡಿಗಳಿಗೆ ಸೋಮವಾರ ಪುರಸಭೆ ಸದಸ್ಯರು, ಬೆಂಬಲಿಗರೊಂದಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜನರು ದೂರಿದಾಗ ಅಂಗಡಿಗಳನ್ನು ತೆರವುಗೊಳಿಸಿ ಬಳಿಕ ಮಾರಾಟಕ್ಕೆ ಅನುವು ಮಾಡಿಕೊಟ್ಟ ಪುರಸಭೆ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದೇ ವೇಳೆ ಪುರಸಭೆ ಸದಸ್ಯರಾದ ರಾಜಶೇಖರ ಸಿರಿಗೇರಿ, ಆನಂದ ಮ್ಯಾಗಳಮನಿ ಮಾರುಕಟ್ಟೆಯಲ್ಲಿಯ ಸಮಸ್ಯೆಗಳನ್ನು ಪುರಸಭೆ ಮುಖ್ಯಾಧಿಕಾರಿಗೆ ಮನವರಿಕೆ ಮಾಡಿ, ವಿವಿಧೆಡೆ ಇರುವ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡ ಮರಿಯಪ್ಪ ಮಾತನಾಡಿ, ಎಲ್ಲಾ ಮಾಂಸದ ಅಂಗಡಿಗಳನ್ನು ಮಾರುಕಟ್ಟೆಗೆ ಸ್ಥಳಾಂತರಿಸಿ, ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಕೋರಿದರು. ಆರೋಗ್ಯ ನಿರೀಕ್ಷಕಿ ಭೇಟಿ ನೀಡಿ, ವಿಷಯವನ್ನು ಮುಖ್ಯಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.</p>.<p>ಮುಖಂಡರಾದ ಬಸವರಾಜ ಎತ್ತಿನಮನಿ, ಧನಂಜಯ್ ಎಲಿಗಾರ, ಚಿಕನ್ ಮಾರಾಟಗಾರರಾದ ಹೊನ್ನೂರಸಾಬ, ಜಾವೇದ ಖುರೇಶಿ, ಗಫೂರ್, ಜಿಲಾನಿಪಾಶಾ, ಹುಸೇನ್ಸಾಬ, ಮೌಲಾಸಾಬ, ಖಾದರಸಾಬ, ಸಮದಾನಿ, ರಾಜಾಹುಸೇನ್, ಮಕ್ಬೂಲ್ಸಾಬ, ನಬಿಸಾಬ, ಶರ್ಮಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>