ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾರ್ಮ್‌–3: ಧರಣಿ ವಾಪಸ್‌

Last Updated 30 ಮಾರ್ಚ್ 2023, 4:26 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿಗೆ ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವೇಶನ ಹಾಗೂ ಕಟ್ಟಡಗಳಿಗೆ ಫಾರ್ಮ್‌ ನಂಬರ್‌ 3 ನೀಡಬೇಕು ಎಂದು ಆಗ್ರಹಿಸಿ ಹೋರಾಟ ಸಮಿತಿ ಸೋಮವಾರ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಬುಧವಾರ ಮುಕ್ತಾಯವಾಗಿದೆ.

‘ಬುಧವಾರ ನಾಲ್ಕು ಜನರಿಗೆ ದಾಖಲಾತಿ ನೀಡಲಾಗಿದೆ. ಕೊಪ್ಪಳ ತಹಶೀಲ್ದಾರ್‌ ಅಮರೇಶ ಬಿರಾದಾರ್‌ ಸಮಸ್ಯೆ ಪರಿಹರಿಸಿದ್ದಾರೆ. ಹೀಗಾಗಿ ಧರಣಿ ವಾಪಸ್‌ ಪಡೆದಿದ್ದೇವೆ. ಗುರುವಾರದಿಂದ ಅರ್ಜಿ ಸಲ್ಲಿಸದವರಿಗೆ ಸರತಿ ಮೇಲೆ ಫಾರ್ಮ್‌ ನಂಬರ್‌ 3 ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ’ ಎಂದು ಹೋರಾಟ ಸಮಿತಿ ಅಧ್ಯಕ್ಷ ಗ್ಯಾನೇಶ್ ಹ್ಯಾಟಿ ತಿಳಿಸಿದರು.

ಉದ್ಯಮಿ ಶ್ರೀನಿವಾಸ ಗುಪ್ತಾ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಮಹಾಂತಯ್ಯಮಠ ಸೇರಿದಂತೆ ಅನೇಕರು ಹೋರಾಟಕ್ಕೆ ಬೆಂಬಲ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT