ತಾವರಗೇರಾ: ‘ಇಲ್ಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಪ್ರತಿ ವರ್ಷದಂತೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಆದರೆ, ಸಮರ್ಪಕವಾಗಿ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ’ ಎಂದು ರೈತರು ಆರೋಪಿಸಿದರು.
ಕೇಂದ್ರದಲ್ಲಿ ಇಲಾಖೆ ಸಿಬ್ಬಂದಿ ರೈತರ ದಾಖಲಾತಿ ಪಡೆಯುತ್ತಾರೆ. ಆದರೆ ಬೇಗ ಬಿತ್ತನೆ ಬೀಜ ನೀಡುವುದಿಲ್ಲ. ಎರಡು ಮೂರು ದಿನ ಸಾಲಲ್ಲಿ ನಿಂತರೂ ಬೀಜ ದೊರೆಯುತ್ತಿಲ್ಲ. ಇದರಿಂದ ತೊಂದರೆ ಅನುಭವಿಸುತ್ತಿದ್ದೇವೆ ಎಂದು ರೈತ ರುದ್ರಪ್ಪ ಅಕ್ಕಿ ಹೇಳಿದರು.
ಈ ವ್ಯವಸ್ಥೆಯಿಂದ ದೂರದ ಗ್ರಾಮಗಳಿಂದ ಬರುವ ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರದಲ್ಲಿ ಸಮರ್ಪಕ ಸಿಬ್ಬಂದಿ ಮತ್ತು ರೈತರಿಗೆ ಅನುಕೂಲವಾಗುವಂತೆ ಸಾಲಾಗಿ ನಿಲ್ಲಲು ನೆರಳಿನ ವ್ಯವಸ್ಥೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.