ವಿಜಯನಗರ ಆಳರಸರ ಕಾಲದಲ್ಲಿ ನಿರ್ಮಿತವಾದ ತಿರುಗಲ್ ತಿಮ್ಮಪ್ಪ ದೇವಸ್ಥಾನ ಗೋಪುರ, ಲಕ್ಷ್ಮೀದೇವಿ ಮಂದಿರಗಳು ಶಿಥಿಲಾವಸ್ಥೆಗೆ ತಲುಪಿವೆ. ಇವುಗಳನ್ನು ರಕ್ಷಣೆ ಮಾಡಿದರೆ ಮುಂದಿನ ಪೀಳಿಗೆಗೆ ಉಳಿಸಿಕೊಂಡಂತಾಗುತ್ತದೆ. ಇದೀಗ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಕೋಟೆಯ ಗೋಡೆ ಕುಸಿಯುತ್ತಿದೆ. ಮಂದಿರ ಪ್ರವೇಶ ದ್ವಾರದ ಬಲ ಪಾರ್ಶ್ವದಲ್ಲಿ ಕೋಟೆಯ ಭಾಗ ಕುಸಿದು ಬಿದ್ದಿದೆ. ಜಿಲ್ಲೆಯ ಲ್ಲಿಯೇ ಅಪರೂಪವಾಗಿರುವ ಇಲ್ಲಿನ ಕೋಟೆ, ಸಾಲು ಮಂಟಪಗಳು ನಶಿಸುವ ಮುನ್ನ ಇವುಗಳನ್ನು ರಕ್ಷಿಸುವುದು ಅಗತ್ಯ ಎಂದು ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಅಧ್ಯಕ್ಷ ವೀರಣ್ಣ ಕೋಮಲಾಪುರ ಮತ್ತು ಪ್ರಧಾನ ಕಾರ್ಯದರ್ಶಿ ವಸಂತ್ ಶಿಳ್ಳೆಕ್ಯಾತರ್ ಅವರು ಮನವಿ ಮಾಡಿದ್ದಾರೆ.