<p><strong>ಗಂಗಾವತಿ</strong>: ಗ್ರಂಥಾಲಯಗಳು ಜ್ಞಾನ ಸಂಪತ್ತಿನ ಆಗರವಾಗಿವೆ. ಪತ್ರಕರ್ತರು ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅಧ್ಯಯನಕ್ಕೆ ಪೂರಕವಾಗಿವೆ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಹಿಂಬದಿ ಇರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯ ಕಟ್ಟಡ ನಿರ್ಮಾಣ ಮುಂದುವರಿದ ಕಾಮಗಾರಿಗೆ ಮಂಗಳವಾರ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಪತ್ರಕರ್ತರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸದ ಜೊತೆಗೆ ಅಭಿವೃದ್ಧಿಪರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಪತ್ರಿಕಾ ಭವನ ನಿರ್ಮಿಸಿರುವ ‘ಕಾನಿಪಸ’ದ ಸದಸ್ಯರು ಇದೀಗ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.</p>.<p>ಪತ್ರಕರ್ತರ ಈ ಸಮಾಜಮುಖಿ ಕಾರ್ಯ ಮೆಚ್ಚಿ, ನನೆಗುದಿಗೆ ಬಿದ್ದಿರುವ ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ₹ 5 ಲಕ್ಷ ಅನುದಾನ ನೀಡಿದರು. ಶೀಘ್ರವಾಗಿ ಗುಣಮಟ್ಟದ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಮಾಡಿಕೊಡುವಂತೆ ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬೆಳಗಲ್ಮಠ ಮಾತನಾಡಿದರು.</p>.<p>ಪ್ರಧಾನ ಕಾರ್ಯದರ್ಶಿ ಹರೀಶ ಕುಲಕರ್ಣಿ, ಪತ್ರಕರ್ತರಾದ ವಿರೇಶ ಬಳ್ಳಾರಿ, ಕೃಷ್ಣಾ ವಿರುಪಾಪುರ, ನಾಗರಾಜ ಇಂಗಳಗಿ, ದೇವರಾಜ, ಶ್ರೀನಿವಾಸ ದೇವಿಕೇರಿ, ಚಂದ್ರಶೇಖರ ಮುಕ್ಕುಂದಿ, ದಶರಥ, ವಸಂತ, ರವಿ ಸಾಕ್ಷಿ, ವಾಗೇಶಸ್ವಾಮಿ, ಕಾಸಿಂ ಕೊನಿ, ಗಾದಿಲಿಂಗಪ್ಪ, ಕಾಸಿ, ಮಲ್ಲಿಕಾರ್ಜುನ, ಮಂಜುನಾಥ ಗುಡ್ಲಾನೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಗ್ರಂಥಾಲಯಗಳು ಜ್ಞಾನ ಸಂಪತ್ತಿನ ಆಗರವಾಗಿವೆ. ಪತ್ರಕರ್ತರು ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅಧ್ಯಯನಕ್ಕೆ ಪೂರಕವಾಗಿವೆ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಹಿಂಬದಿ ಇರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯ ಕಟ್ಟಡ ನಿರ್ಮಾಣ ಮುಂದುವರಿದ ಕಾಮಗಾರಿಗೆ ಮಂಗಳವಾರ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಪತ್ರಕರ್ತರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸದ ಜೊತೆಗೆ ಅಭಿವೃದ್ಧಿಪರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಪತ್ರಿಕಾ ಭವನ ನಿರ್ಮಿಸಿರುವ ‘ಕಾನಿಪಸ’ದ ಸದಸ್ಯರು ಇದೀಗ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.</p>.<p>ಪತ್ರಕರ್ತರ ಈ ಸಮಾಜಮುಖಿ ಕಾರ್ಯ ಮೆಚ್ಚಿ, ನನೆಗುದಿಗೆ ಬಿದ್ದಿರುವ ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ₹ 5 ಲಕ್ಷ ಅನುದಾನ ನೀಡಿದರು. ಶೀಘ್ರವಾಗಿ ಗುಣಮಟ್ಟದ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಮಾಡಿಕೊಡುವಂತೆ ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬೆಳಗಲ್ಮಠ ಮಾತನಾಡಿದರು.</p>.<p>ಪ್ರಧಾನ ಕಾರ್ಯದರ್ಶಿ ಹರೀಶ ಕುಲಕರ್ಣಿ, ಪತ್ರಕರ್ತರಾದ ವಿರೇಶ ಬಳ್ಳಾರಿ, ಕೃಷ್ಣಾ ವಿರುಪಾಪುರ, ನಾಗರಾಜ ಇಂಗಳಗಿ, ದೇವರಾಜ, ಶ್ರೀನಿವಾಸ ದೇವಿಕೇರಿ, ಚಂದ್ರಶೇಖರ ಮುಕ್ಕುಂದಿ, ದಶರಥ, ವಸಂತ, ರವಿ ಸಾಕ್ಷಿ, ವಾಗೇಶಸ್ವಾಮಿ, ಕಾಸಿಂ ಕೊನಿ, ಗಾದಿಲಿಂಗಪ್ಪ, ಕಾಸಿ, ಮಲ್ಲಿಕಾರ್ಜುನ, ಮಂಜುನಾಥ ಗುಡ್ಲಾನೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>