<p><strong>ಅಳವಂಡಿ:</strong> ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು. </p>.<p>ಬೆಳವಿನಾಳ, ಹಾಲವರ್ತಿ, ಲಾಚನಕೇರಿ, ಚಿಕ್ಕಬಗನಾಳ, ಕರ್ಕಿಹಳ್ಳಿ, ಹ್ಯಾಟಿ, ಹೊಸ ಗೊಂಡಬಾಳ, ಹೊಸಳ್ಳಿ ಹಾಗೂ ಬಹದ್ದೂರ್ ಬಂಡಿ ಗ್ರಾಮಗಳಲ್ಲಿ ಅಂದಾಜು ₹14.50 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿವೆ.</p>.<p>ಬಳಿಕ ಮಾತನಾಡಿದ ಅವರು ‘ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಹದಗೆಟ್ಟಿರುವ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರಲಾಗುತ್ತಿದೆ. ಈಗಾಗಲೇ ಶೇ 80ರಷ್ಟು ರಸ್ತೆಗಳ ಅಭಿವೃದ್ಧಿ ಪ್ರಗತಿಗಲ್ಲಿವೆ. ಇನ್ನುಳಿದ ರಸ್ತೆಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಪಕ್ಷದ ಮುಖಂಡರಾದ ಗೂಳಪ್ಪ ಹಲಗೇರಿ, ಪ್ರಸನ್ನ ಗಡಾದ, ಬಾಲಚಂದ್ರನ್, ಹೇಮಣ್ಣ ದೇವರಮನಿ, ಶರಣಪ್ಪ ಸಜ್ಜನ್, ಹನಮೇಶ್ ಹೊಸಳ್ಳಿ, ರವಿ ಕುರಗೋಡ, ಬನ್ನೇಪಗೌಡ, ತೋಟಪ್ಪ ಕಾಮನೂರ, ಜಗದೀಶ್ ಕರ್ಕಿಹಳ್ಳಿ, ಮಂಜುನಾಥ ಗೊಂಡಬಾಳ, ತಹಶೀಲ್ದಾರ್ ವಿಠ್ಠಲ ಚೌಗುಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು. </p>.<p>ಬೆಳವಿನಾಳ, ಹಾಲವರ್ತಿ, ಲಾಚನಕೇರಿ, ಚಿಕ್ಕಬಗನಾಳ, ಕರ್ಕಿಹಳ್ಳಿ, ಹ್ಯಾಟಿ, ಹೊಸ ಗೊಂಡಬಾಳ, ಹೊಸಳ್ಳಿ ಹಾಗೂ ಬಹದ್ದೂರ್ ಬಂಡಿ ಗ್ರಾಮಗಳಲ್ಲಿ ಅಂದಾಜು ₹14.50 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿವೆ.</p>.<p>ಬಳಿಕ ಮಾತನಾಡಿದ ಅವರು ‘ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಹದಗೆಟ್ಟಿರುವ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರಲಾಗುತ್ತಿದೆ. ಈಗಾಗಲೇ ಶೇ 80ರಷ್ಟು ರಸ್ತೆಗಳ ಅಭಿವೃದ್ಧಿ ಪ್ರಗತಿಗಲ್ಲಿವೆ. ಇನ್ನುಳಿದ ರಸ್ತೆಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಪಕ್ಷದ ಮುಖಂಡರಾದ ಗೂಳಪ್ಪ ಹಲಗೇರಿ, ಪ್ರಸನ್ನ ಗಡಾದ, ಬಾಲಚಂದ್ರನ್, ಹೇಮಣ್ಣ ದೇವರಮನಿ, ಶರಣಪ್ಪ ಸಜ್ಜನ್, ಹನಮೇಶ್ ಹೊಸಳ್ಳಿ, ರವಿ ಕುರಗೋಡ, ಬನ್ನೇಪಗೌಡ, ತೋಟಪ್ಪ ಕಾಮನೂರ, ಜಗದೀಶ್ ಕರ್ಕಿಹಳ್ಳಿ, ಮಂಜುನಾಥ ಗೊಂಡಬಾಳ, ತಹಶೀಲ್ದಾರ್ ವಿಠ್ಠಲ ಚೌಗುಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>